Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...