Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...