Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...