Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...