Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...