Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...