Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...