Homeಕರ್ನಾಟಕನಾಡದ್ರೋಹಿ ರೋಹಿತ್ ಚಕ್ರತೀರ್ಥನನ್ನು ಕಿತ್ತೊಗೆಯಿರಿ: ಕನ್ನಡಪರ ಸಂಘಟನೆಗಳ ಆಗ್ರಹ

ನಾಡದ್ರೋಹಿ ರೋಹಿತ್ ಚಕ್ರತೀರ್ಥನನ್ನು ಕಿತ್ತೊಗೆಯಿರಿ: ಕನ್ನಡಪರ ಸಂಘಟನೆಗಳ ಆಗ್ರಹ

- Advertisement -
- Advertisement -

ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸಿದ, ನಾಡಗೀತೆ ಮತ್ತು ಕನ್ನಡ ಬಾವುಟಕ್ಕೆ ಅಪಚಾರವೆಸಗಿದ ರೋಹಿತ್ ಚಕ್ರತೀರ್ಥನನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಿಂದ ಕಿತ್ತೊಗೆಯಿರಿ ಎಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ಮಲ್ಲೇಶ್ವರಂನಲ್ಲಿನ ಕುವೆಂಪು ಪ್ರತಿಮೆ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ಕರುನಾಡ ಸೇವಕರು, ಪ್ರಗತಿಪರ ಸಂಘಟನೆಗಳು ಕಾರ್ಯಕರ್ತರು 420 ರೋಹಿತ್ ಚಕ್ರತೀರ್ಥ ಎಂಬ ಘೋಷಣೆ ಕೂಗಿ, ಆತನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಮಾತನಾಡಿ, “ಸರ್ಕಾರದಿಂದ ಮಾನ್ಯತೆ ಪಡೆದಿರುವ ನಮ್ಮ ನಾಡಿನ ಹೆಮ್ಮೆಯ ನಾಡಗೀತೆಯನ್ನು ತಿರುಚಿ ಈ ರೋಹಿತ್ ಚಕ್ರತೀರ್ಥ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೆ ಕನ್ನಡ ಧ್ವಜವನ್ನು ತನ್ನ ಒಳ ಉಡುಪುಗಳಿಗೆ ಹೋಲಿಸಿ ವಿಕೃತಿ ಮೆರದಿದ್ದರು. ಇಂತಹ ನಾಡದ್ರೋಹಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಶಿಕ್ಷಣ ಸಚಿವ ನಾಗೇಶ್‌ರವರು ಆತನ ಕುಕೃತ್ಯಗಳನ್ನು ಸಮರ್ಥಿಸಿಕೊಂಡು ನನ್ನ ಫೋನ್ ಕಟ್ ಮಾಡಿ ಬ್ಲಾಕ್‌ಲಿಸ್ಟ್‌ಗೆ ಹಾಕಿದ್ದಾರೆ. ಸರ್ಕಾರದಲ್ಲಿ ಉನ್ನತ ಹುದ್ದೆ ಪಡೆಯಲು ನಾಡಗೀತೆಯನ್ನು ಅವಮಾನಿಸಬೇಕು ಎಂದು ಅವರು ಉತ್ತರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷೆಯನ್ನು ಮಾತನಾಡುವವರು ಸೋಮಾರಿಗಳು ಎಂದು ಈ ರೋಹಿತ್ ಚಕ್ರತೀರ್ಥ ಬರೆಯುತ್ತಾನೆ. ಇಂತಹ ವ್ಯಕ್ತಿಯನ್ನು ಯಾವ ಅರ್ಹತೆಯ ಆಧಾರದಲ್ಲಿ ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಲಾಗಿದೆ? ಕ್ರಿಯೆಗೆ ಪ್ರತಿಕ್ರಿಯೆ ಎನ್ನುವ ಸಿಎಂ ಬೊಮ್ಮಾಯಿಯವರು ಈಗ ಎಲ್ಲಿ ಕೂತಿದ್ದಾರೆ? ಅವರು ನಾಡಿನ ಅಸ್ಮಿತೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೋಹಿತ್ ಚಕ್ರತೀರ್ಥನ ಮೇಲೆ ಐಪಿಸಿ ಸೆಕ್ಷನ್ 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಆತ ಕುವೆಂಪುರವರ ಪ್ರತಿಮೆಯ ಕಾಲಿಗೆ ಬಿದ್ದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕನ್ನಡದ ಮಕ್ಕಳು ಸುಮ್ಮನೆ ಬಿಡುವುದಿಲ್ಲ. ಕುವೆಂಪುರವರ, ಬಸವಣ್ಣನವರ, ಸಂಗೊಳ್ಳಿ ರಾಯಣ್ಣನವರ ವಿಚಾರಗಳು ಎಲ್ಲಾ ಕನ್ನಡಿಗರಿಗೆ ಸಂಬಂಧಿಸಿವೆ. ಯಾವುದೊ ಒಂದು ಜಾತಿಗೆ ಅಲ್ಲ ಎಂದು ಅವರು ತಿಳಿಸಿದರು.

ಸರ್ವ ಜನಾಂಗದ ಶಾಂತಿಯ ತೋಟವನ್ನು ಪ್ರತಿಯೊಬ್ಬರು ಪ್ರೀತಿಯಿಂದ ಕಟ್ಟುತ್ತಿದ್ದೇವೆ. ಅದನ್ನು ಹಿಂಸೆಯ ಬೀಡಾಗಿ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯ ಶಿವರಾಮೇಗೌಡರು, ಕನ್ನಡ ಹೋರಾಟಗಾರರಾದ ನೆಲಮಂಗಲ ಸುರೇಶ್ ರವರು ಮಾತನಾಡಿದರು.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...