HomeUncategorizedಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

- Advertisement -
- Advertisement -

ಜೈಪುರದಲ್ಲಿ ಮೂವರು ಮುಸ್ಲಿಂ ಪ್ರಯಾಣಿಕರು ಮತ್ತು ತನ್ನ ಹಿರಿಯ ಅಧಿಕಾರಿಯನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಆರ್‌ಪಿಎಫ್ ಪೇದೆಯಾಗಿದ್ದ ಚೇತನ್‌ ಸಿಂಗ್‌ ಚೌಧರಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಪ್ರತಿವಾದಿಗಳ ವಾದವನ್ನು ಪರಿಗಣಿಸಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಚೌಧರಿ ವಿಚಾರಣೆ ಭಾಗವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಕಳೆದ ತಿಂಗಳು ವಕೀಲರಾದ ಅಮಿತ್ ಮಿಶ್ರಾ ಮತ್ತು ಪಂಕಜ್ ಘಿಲ್ಡಿಯಾಲ್ ಅವರ ಮೂಲಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದ ಆರೋಪಿಯು, ತಾನು ಭೂತ ಭ್ರಮೆಗಳಿಂದ ಬಳಲುತ್ತಿದ್ದೇನೆ, ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದ. ಪೊಲೀಸರು ಜಾಮೀನು ಅರ್ಜಿಗೆ ವಿರೋಧಿಸಿದ್ದು, ಆರೋಪಿ ನಿರ್ದಿಷ್ಟ ಸಮುದಾಯದ ಬಗ್ಗೆ ಕೋಪ ಮತ್ತು ದ್ವೇಷವನ್ನು ಹೊಂದಿದ್ದ ಮತ್ತು ಮಾಡಿದ ಅಪರಾಧಕ್ಕೆ ಯಾವುದೇ ಪಶ್ಚಾತ್ತಾಪವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗೆ ಜಾಮೀನು ಮಂಜೂರು ಮಾಡಿದರೆ, ಅದು ಕಾನೂನಿನ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುತ್ತದೆ ಮತ್ತು ಕೆಲವು ಧಾರ್ಮಿಕ ಗುಂಪುಗಳಲ್ಲಿ ಭಯ, ಭೀತಿ ಮತ್ತು ಅಭದ್ರತೆಯನ್ನು ಉಂಟುಮಾಡಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಸಂತ್ರಸ್ತ ಅಸ್ಗರ್ ಶೇಖ್ ಅವರ ಪತ್ನಿ ಉಮೇಸಾ ಖಾತೂನ್ ಅವರು ತಮ್ಮ ವಕೀಲರಾದ ಕರೀಂ ಪಠಾಣ್ ಮತ್ತು ಫಜ್ಲುರ್ರಹ್ಮಾನ್ ಶೇಖ್ ಅವರ ಮೂಲಕ ಚೌಧರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ. ಆರೋಪಿಯು ಭಯೋತ್ಪಾದಕ ಮನೋಭಾವದ ವ್ಯಕ್ತಿಯಾಗಿದ್ದಾನೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾನೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ಜು.31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದ. ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ  ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...