HomeUncategorizedಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

- Advertisement -
- Advertisement -

ಜೈಪುರದಲ್ಲಿ ಮೂವರು ಮುಸ್ಲಿಂ ಪ್ರಯಾಣಿಕರು ಮತ್ತು ತನ್ನ ಹಿರಿಯ ಅಧಿಕಾರಿಯನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಆರ್‌ಪಿಎಫ್ ಪೇದೆಯಾಗಿದ್ದ ಚೇತನ್‌ ಸಿಂಗ್‌ ಚೌಧರಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಪ್ರತಿವಾದಿಗಳ ವಾದವನ್ನು ಪರಿಗಣಿಸಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಚೌಧರಿ ವಿಚಾರಣೆ ಭಾಗವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಕಳೆದ ತಿಂಗಳು ವಕೀಲರಾದ ಅಮಿತ್ ಮಿಶ್ರಾ ಮತ್ತು ಪಂಕಜ್ ಘಿಲ್ಡಿಯಾಲ್ ಅವರ ಮೂಲಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದ ಆರೋಪಿಯು, ತಾನು ಭೂತ ಭ್ರಮೆಗಳಿಂದ ಬಳಲುತ್ತಿದ್ದೇನೆ, ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದ. ಪೊಲೀಸರು ಜಾಮೀನು ಅರ್ಜಿಗೆ ವಿರೋಧಿಸಿದ್ದು, ಆರೋಪಿ ನಿರ್ದಿಷ್ಟ ಸಮುದಾಯದ ಬಗ್ಗೆ ಕೋಪ ಮತ್ತು ದ್ವೇಷವನ್ನು ಹೊಂದಿದ್ದ ಮತ್ತು ಮಾಡಿದ ಅಪರಾಧಕ್ಕೆ ಯಾವುದೇ ಪಶ್ಚಾತ್ತಾಪವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗೆ ಜಾಮೀನು ಮಂಜೂರು ಮಾಡಿದರೆ, ಅದು ಕಾನೂನಿನ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುತ್ತದೆ ಮತ್ತು ಕೆಲವು ಧಾರ್ಮಿಕ ಗುಂಪುಗಳಲ್ಲಿ ಭಯ, ಭೀತಿ ಮತ್ತು ಅಭದ್ರತೆಯನ್ನು ಉಂಟುಮಾಡಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಸಂತ್ರಸ್ತ ಅಸ್ಗರ್ ಶೇಖ್ ಅವರ ಪತ್ನಿ ಉಮೇಸಾ ಖಾತೂನ್ ಅವರು ತಮ್ಮ ವಕೀಲರಾದ ಕರೀಂ ಪಠಾಣ್ ಮತ್ತು ಫಜ್ಲುರ್ರಹ್ಮಾನ್ ಶೇಖ್ ಅವರ ಮೂಲಕ ಚೌಧರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ. ಆರೋಪಿಯು ಭಯೋತ್ಪಾದಕ ಮನೋಭಾವದ ವ್ಯಕ್ತಿಯಾಗಿದ್ದಾನೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾನೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ಜು.31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದ. ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ  ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...