HomeUncategorizedಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

- Advertisement -
- Advertisement -

ಜೈಪುರದಲ್ಲಿ ಮೂವರು ಮುಸ್ಲಿಂ ಪ್ರಯಾಣಿಕರು ಮತ್ತು ತನ್ನ ಹಿರಿಯ ಅಧಿಕಾರಿಯನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಆರ್‌ಪಿಎಫ್ ಪೇದೆಯಾಗಿದ್ದ ಚೇತನ್‌ ಸಿಂಗ್‌ ಚೌಧರಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಪ್ರತಿವಾದಿಗಳ ವಾದವನ್ನು ಪರಿಗಣಿಸಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಚೌಧರಿ ವಿಚಾರಣೆ ಭಾಗವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಕಳೆದ ತಿಂಗಳು ವಕೀಲರಾದ ಅಮಿತ್ ಮಿಶ್ರಾ ಮತ್ತು ಪಂಕಜ್ ಘಿಲ್ಡಿಯಾಲ್ ಅವರ ಮೂಲಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದ ಆರೋಪಿಯು, ತಾನು ಭೂತ ಭ್ರಮೆಗಳಿಂದ ಬಳಲುತ್ತಿದ್ದೇನೆ, ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದ. ಪೊಲೀಸರು ಜಾಮೀನು ಅರ್ಜಿಗೆ ವಿರೋಧಿಸಿದ್ದು, ಆರೋಪಿ ನಿರ್ದಿಷ್ಟ ಸಮುದಾಯದ ಬಗ್ಗೆ ಕೋಪ ಮತ್ತು ದ್ವೇಷವನ್ನು ಹೊಂದಿದ್ದ ಮತ್ತು ಮಾಡಿದ ಅಪರಾಧಕ್ಕೆ ಯಾವುದೇ ಪಶ್ಚಾತ್ತಾಪವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗೆ ಜಾಮೀನು ಮಂಜೂರು ಮಾಡಿದರೆ, ಅದು ಕಾನೂನಿನ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುತ್ತದೆ ಮತ್ತು ಕೆಲವು ಧಾರ್ಮಿಕ ಗುಂಪುಗಳಲ್ಲಿ ಭಯ, ಭೀತಿ ಮತ್ತು ಅಭದ್ರತೆಯನ್ನು ಉಂಟುಮಾಡಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಸಂತ್ರಸ್ತ ಅಸ್ಗರ್ ಶೇಖ್ ಅವರ ಪತ್ನಿ ಉಮೇಸಾ ಖಾತೂನ್ ಅವರು ತಮ್ಮ ವಕೀಲರಾದ ಕರೀಂ ಪಠಾಣ್ ಮತ್ತು ಫಜ್ಲುರ್ರಹ್ಮಾನ್ ಶೇಖ್ ಅವರ ಮೂಲಕ ಚೌಧರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ. ಆರೋಪಿಯು ಭಯೋತ್ಪಾದಕ ಮನೋಭಾವದ ವ್ಯಕ್ತಿಯಾಗಿದ್ದಾನೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾನೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ಜು.31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದ. ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ  ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

0
ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು...