Homeಚಳವಳಿ17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುದು ತಮ್ಮ ಪ್ರಮುಖ ಬೇಡಿಕೆ ಎಂದು ಹೇಳಿರುವ ರೈತ ಒಕ್ಕೂಟಗಳು, ಕಾನೂನುಗಳಲ್ಲಿ ತಿದ್ದುಪಡಿ ಮಾಡುತ್ತೇವೆ ಎನ್ನುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಿಕೊಂಡಿಲ್ಲ.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲೇಬೇಕೆಂದು ಹಠ ಹಿಡಿದು ಕಳೆದ 17 ದಿನಗಳಿಂದ ಯಾವುದೇ ದೌರ್ಜನ್ಯಕ್ಕೂ ಜಗ್ಗದೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಲ್ಲಿ ಇದುವರೆಗೂ 11 ಮಂದಿ ರೈತರು ಸಾವನ್ನಪ್ಪಿದ್ದಾರೆ.

ಕೃಷಿ ಕಾಯ್ದೆಗಳ ಕುರಿತು, ಕೇಂದ್ರ ಸರ್ಕಾರ ಮತ್ತು ರೈತರ ಪ್ರತಿನಿಧಿಗಳ ನಡುವೆ ಕನಿಷ್ಠ ಐದು ಸುತ್ತಿನ ಔಪಚಾರಿಕ ಮಾತುಕತೆಗಳು ನಡೆದಿವೆ. ಮುಖ್ಯವಾಗಿ ಪಂಜಾಬ್ ಮತ್ತು ಹರಿಯಾಣದ ರೈತರು ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುದು ತಮ್ಮ ಪ್ರಮುಖ ಬೇಡಿಕೆ ಎಂದು ಹೇಳಿರುವ ರೈತ ಒಕ್ಕೂಟಗಳು, ಕಾನೂನುಗಳಲ್ಲಿ ತಿದ್ದುಪಡಿ ಮಾಡುತ್ತೇವೆ ಎನ್ನುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಕಳೆದ 17 ದಿನಗಳಲ್ಲಿ ಅನಾರೋಗ್ಯದಂತಹ ವಿವಿಧ ಕಾರಣಗಳಿಂದಾಗಿ ಪ್ರತಿಭಟನಾ ನಿರತ 11 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ, “ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯಲು ರೈತರು ಇನ್ನೂ ಎಷ್ಟು ಬಲಿದಾನಗಳನ್ನು ಮಾಡಬೇಕಾಗುತ್ತದೆ?” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಲಾ ಕೂಡ ಟ್ವೀಟ್ ಮಾಡಿದ್ದು, “ಕಳೆದ 17 ದಿನಗಳಲ್ಲಿ 11 ರೈತ ಬಾಂಧವರು ಹುತಾತ್ಮರಾಗಿದ್ದರೂ, ಮೋದಿ ಸರ್ಕಾರ ಪಶ್ಚಾತ್ತಾಪ ಪಡುತ್ತಿಲ್ಲ. ಅವರು (ಸರ್ಕಾರ) ಇನ್ನೂ ತಮಗೆ ಹಣ ಒದಗಿಸುವವರ ಜೊತೆ ನಿಂತಿದ್ದಾರೆ. ಅನ್ನದಾತರೊಂದಿಗೆ ಅಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಜೊತೆಗೆ ’ರಾಜಧರ್ಮ (ಸಾಂವಿಧಾನಿಕ ಜವಾಬ್ದಾರಿ) ದೊಡ್ಡದೋ ಅಥವಾ ಹಠ ದೊಡ್ಡದೋ ಎಂಬುದನ್ನು ದೇಶ ತಿಳಿಯಲು ಬಯಸುತ್ತದೆ’ ಎಂದು ರಾಹುಲ್ ಗಾಂಧಿಯವರು ಉಲ್ಲೇಖಿಸಿರುವ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿರುವ ಸುರ್ಜೆವಾಲಾ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 17 ದಿನಗಳಿಂದ ಪ್ರತಿಭಟಿಸುತ್ತಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗಳೆಂದು ಸರ್ಕಾರವು ಪದೇ ಪದೇ ಹೇಳುತ್ತಿದೆ.

ಆದಾಗ್ಯೂ, ಪ್ರತಿಭಟನಾ ನಿರತ ರೈತರು ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ  ತೆಗೆದು ಹಾಕುತ್ತದೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುತ್ತವೆ. ರೈತರನ್ನು ಕಂಪನಿಗಳ ಕೆಳಗೆ ಕೆಲಸ ಮಾಡುವಂತೆ ಮಾಡುತ್ತವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...