Homeಮುಖಪುಟಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಗಾಗಿಲ್ಲ ಏಕೆ?

ಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಗಾಗಿಲ್ಲ ಏಕೆ?

ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳು ಅನ್ವಯವಾಗುತ್ತವೆ, ಆದರೆ ಕೆಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವವರಿಗೆ ಕೆಲವು ವಿನಾಯಿತಿಗಳಿರುತ್ತವೆ ಎನ್ನುವ ಮೂಲಕ ಅವರು ಕ್ವಾರಂಟೈನ್‌ಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸಚಿವ ಸದಾನಂದ ಗೌಡರು ದೆಹಲಿಯಿಂದ ಬಂದಿಳಿದರೂ ಕ್ವಾರಂಟೈನ್‌ಗೆ ಒಳಪಟ್ಟಿಲ್ಲ. ಜನರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯವೇ ಎಂದು ವಿಪಕ್ಷಗಳ ಆರೋಪ ಮಾಡಿವೆ.

ಇಂದಿನಿಂದ ದೇಶಿಯ ವಿಮಾನಯಾನ ಸೇವೆ ಆರಂಭವಾಗಿದೆ. ನಿಯಮಗಳ ಪ್ರಕಾರ ಅಂತರ್‌ರಾಜ್ಯ ಪ್ರವಾಸ ಮಾಡಿದವರು 14 ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಆದರೆ ಇಂದು ದೆಹಲಿಯಿಂದ ಆಗಮಿಸಿದ ಸದಾನಂದಗೌಡರು ಕ್ವಾರಂಟೈನ್‌ಗೆ ಒಳಪಡದೇ ಇರುವುದರಿಂದ ವಿವಾದ ಭುಗಿಲೆದ್ದಿದೆ.

ಕೇಂದ್ರ ಸಚಿವ ಸದಾನಂದ ಗೌಡರು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದರು. ಆದರೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಿಲ್ಲ. ಔಷಧ ಸಚಿವರಾಗಿ ನನಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ಕ್ಯಾರೆಂಟೈನ್ ವಿನಾಯಿತಿ ಪಟ್ಟಿಯಡಿಯಲ್ಲಿ ಫಾರ್ಮಾ ವಲಯವನ್ನು ಉಲ್ಲೇಖಿಸಿಲ್ಲ ಎಂದು ಪತ್ರಕರ್ತ ನಾಗಾರ್ಜುನ್‌ ದ್ವಾರಕನಾಥ್‌ ಟ್ವಿಟ್ಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಇದಕ್ಕೆ ಸದಾನಂದ ಗೌಡರು ಸ್ಪಷ್ಟನೆ ನೀಡಿದ್ದಾರೆ. ನಾನು ಮಂತ್ರಿಯಾಗಿದ್ದೇನೆ ಮತ್ತು ನಾನು ಔಷಧ ಸಚಿವಾಲಯದ ಮುಖ್ಯಸ್ಥನಾಗಿದ್ದೇನೆ. ಔಷಧಿಗಳ ಪೂರೈಕೆ ಮತ್ತು ಇತರ ವಸ್ತುಗಳು ಸರಿಯಾಗಿಲ್ಲದಿದ್ದರೆ ವೈದ್ಯರು ರೋಗಿಗಳಿಗೆ ಏನು ಮಾಡಬಹುದು, ಅದು ಸರ್ಕಾರದ ವೈಫಲ್ಯವಲ್ಲವೇ? ದೇಶದ ಪ್ರತಿಯೊಂದು ಮೂಲೆಯಲ್ಲೂ ಔಷಧಿಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ನಾಗರಿಕರಿಗೆ ಮಾರ್ಗಸೂಚಿಗಳು ಅನ್ವಯವಾಗುತ್ತವೆ, ಆದರೆ ಕೆಲವು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವವರಿಗೆ ಕೆಲವು ವಿನಾಯಿತಿಗಳಿರುತ್ತವೆ ಎನ್ನುವ ಮೂಲಕ ಅವರು ಕ್ವಾರಂಟೈನ್‌ಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ದೆಹಲಿಯಲ್ಲಿದ್ದಾಗಳು ಪ್ರತಿ ಮೂರು ದಿನಗಳಿಗೊಮ್ಮೆ ಕೊರೊನ ಟೆಸ್ಟ್‌ ಮಾಡಿಸಿದ್ದೇನೆ. ಕೊರೊನಾ ನೆಗೆಟಿವ್‌ ಬಂದಿದೆ. ನಮ್ಮ ಸಿಬ್ಬಂದಿಗಳಿಗೂ ಟೆಸ್ಟ್‌ ಮಾಡಿಸಲಾಗಿದೆ. ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದಾಗ ನನ್ನನ್ನು ಟೆಸ್ಟ್‌ ಮಾಡಿದ್ದಾರೆ. ನನ್ನ ಮೊಬೈಲ್‌ ಆರೋಗ್ಯ ಸೇತು ಆಪ್‌ ಇದೆ. ಇದನ್ನೆಲ್ಲ ನೋಡಿಯೇ ನನ್ನನ್ನು ಬಿಟ್ಟಿದ್ದು ಎಂದು ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...