Homeಕರ್ನಾಟಕರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು. ಇನ್ನು ಕೆಲವು ಕಡೆ ನಮ್ಮ ಪಕ್ಷದಲ್ಲಿ ಒಳಒಪ್ಪಂದಗಳು ನಡೆದಿವೆ ಎಂದು ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಹೇಳಿದ್ದಾರೆ.

ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಬಹಳ ಹೀನಾಯವಾಗಿ ಸೋತ ಬಳಿಕ, ಪಕ್ಷದ ನಾಯಕರು ಜಿಲ್ಲಾ ಕೇಂದ್ರಗಳಲ್ಲಿ ಸೋಲಿನ ಪರಾಮರ್ಶೆ ನಡೆಸುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ಹೊಂದಾಣಿಕೆ ರಾಜಕಾರಣವೇ ಸೋಲಿಗೆ ಕಾರಣ ಎಂದು ಹೇಳಿಕೊಂಡಿದ್ದಾರೆ. ಇದೀಗ ಸದಾನಂದಗೌಡ ಕೂಡ ಅದೇ ಮಾತನ್ನು ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಹಾಸನ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.

”ಹೊಂದಾಣಿಕೆ ರಾಜಕಾರಣಕ್ಕೆ ಹಾಸನದಲ್ಲಿ ನಮ್ಮ ಅಭ್ಯರ್ಥಿ ಸೋಲಬೇಕಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮತಗಳನ್ನು ನೋಡಿದರೆ ಹೊಂದಾಣಿಕೆ ರಾಜಕಾರಣ ಅರ್ಥವಾಗುತ್ತದೆ” ಎಂದರು.

”ಸಿಟಿ ರವಿ ಚಿಕ್ಕಮಗಳೂರು ಕ್ಷೇತ್ರದಲ್ಲೂ ಈ ಹೊಂದಾಣಿಕೆ ರಾಜಕಾರಣ ನೋಡಬಹುದು. ಇಲ್ಲಿ ಜೆಡಿಎಸ್‌ ಅಧಿಕೃತವಾಗಿ ಘೋಷಣೆ ಮಾಡಿದೆ. ಇದಲ್ಲದೇ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇದು ಒಳ ಒಪ್ಪಂದದ ರಾಜಕಾರಣಕ್ಕೆ ಉಂಟಾದ ಸೋಲು ನಮ್ಮದು” ಎಂದು ಹೇಳಿದ್ದಾರೆ.

”ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳುವುದಿಲ್ಲ. ಕೆಲವರು ವೈಯಕ್ತಿಕ ದ್ವೇಷಕ್ಕಾಗಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅಂತವರ ಬಗ್ಗೆ ಈಗಾಗಲೇ ಪಕ್ಷ ಒಂದು ನಿರ್ಧಾರಕ್ಕೆ ಬಂದಿದೆ. ಈಗ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಸಭೆಗಳು ನಡೆಯುತ್ತಿವೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಯುತ್ತಿದೆ. ಒಳ ಒಪ್ಪಂದ ಮಾಡಿಕೊಂಡವರ ಬಗ್ಗೆ ಪಕ್ಷ ಖಂಡಿತ ನಿರ್ಧಾರ ತೆಗೆದುಕೊಳ್ಳುತ್ತದೆ. ಸಂಘಟನೆಯಲ್ಲಿ ತಪ್ಪು ಮಾಡಿದವರನ್ನು ತಿದ್ದುವ ಕೆಲಸವನ್ನು ಮಾಡುತ್ತೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಬಾಗಲಕೋಟೆ: ಬೊಮ್ಮಾಯಿ ಭಾಗಿಯಾಗಿದ್ದ ಬಿಜೆಪಿ ಸಭೆಯಲ್ಲಿ ಗಲಾಟೆ

ಒಳ ಒಪ್ಪಂದದಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಸೋಲು: ಮುಖಂಡರ ಆರೋಪ

ಸೋಮವಾರ ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಸೋಲಿಗೆ ಎರಡು ಬಣಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ದೊಡ್ಡ ಗಲಾಟೆಯೇ ನಡೆಯಿತು.

ಜಿಲ್ಲಾ ಮುಖಂಡರ ಸಭೆಯಲ್ಲಿ ಗದ್ದಲ-ಗಲಾಟೆ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ಮುರುಗೇಶ್ ನಿರಾಣಿ ಅವರ ಎದುರೇ ಈ ಘಟನೆ ನಡೆದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆಗಾಗಿ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರೈಸಿದ ಸಂಭ್ರಮಾಚರಣೆಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಭಾಗವಹಿಸಿದ್ದರು.

ಪ್ರಮುಖರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಿಜೆಪಿ ಅಭ್ಯರ್ಥಿ ಸೋಲಿಗೆ ಎರಡು ಗುಂಪುಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡವು. ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಬಿಜೆಪಿ ನಾಮನಿರ್ದೇಶಿತ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪೂಜಾರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಪೂಜಾರ ಪಾಳಯದ ಕೆಲವು ಬೆಂಬಲಿಗರನ್ನು ಸಭೆಯಿಂದ ಹೊರಗಿಡುವಂತೆ ಚರಂತಿಮಠ ಬೆಂಬಲಿಗರು ಒತ್ತಾಯಿಸಿದರು. ಚರಂತಿಮಠ ಅವರೇ ಪದೇ ಪದೇ ಮನವಿ ಮಾಡಿದರೂ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿದರು ಮತ್ತು ಎರಡೂ ಬಣಗಳ ಕೆಲವು ಬೆಂಬಲಿಗರನ್ನು ಸ್ಥಳದಿಂದ ಹೊರಹೋಗುವಂತೆ ಕೇಳಲಾಯಿತು. ಸ್ವಲ್ಪ ಸಮಯದ ನಂತರ ಬೊಮ್ಮಾಯಿ ಮತ್ತು ಯತ್ನಾಳ್ ಸ್ಥಳಕ್ಕೆ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...