Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...