Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...