Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...