Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....