Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...