Homeಚಳವಳಿಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು...!! : ಇಸ್ಮತ್ ಪಜೀರ್

ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು.

- Advertisement -
- Advertisement -

ಎನ್ನಾರ್ಸಿಯ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತುಂಗಕ್ಕೇರಿದ್ದಾಗ ನಾನು ಫೇಸ್‌ಬುಕ್‌ನ ನನ್ನ ಅನೇಕ ಹಿಂದೂ ಗೆಳೆಯರ ಪ್ರೊಫೈಲ್ ಮತ್ತು ಕೆಲವು ಸಜ್ಜನ ಹಿಂದೂಗಳ ಟೈಮ್‌ಲೈನ್‌ಗೆ ಆಗಾಗ ಇಣುಕುತ್ತಿದ್ದೆ. ನನಗೆ ನಿರಾಶೆಯೇ ಕಾದಿತ್ತು. ಮತಿಭ್ರಮಣೆಯಾಗುವುದೊಂದೇ ಉಳಿದಿತ್ತು.‌ ಆ ಮಟ್ಟಿಗೆ ನಾನು ಅತಿಯಾಗಿ ಪ್ರೀತಿಸುತ್ತಿದ್ದ ನನ್ನ ಬದುಕಿನ ನೋವು, ನಲಿವುಗಳನ್ನು ಹಂಚಿಕೊಳ್ಳುತ್ತಿದ್ದ ಮತ್ತು ಮನೆಯ ಸಂಕಷ್ಟಗಳನ್ನೆಲ್ಲಾ ನನ್ನಲ್ಲಿ ತೋಡಿಕೊಳುತ್ತಿದ್ದ ಗೆಳೆಯರಲ್ಲಿ ಬಹುತೇಕರು ಎನ್ನಾರ್ಸಿಯ ಪರವಿದ್ದರು ಮಾತ್ರವಲ್ಲಾ “ಇದು ಹಿಂದೂ ರಾಷ್ಟ್ರ, ಇಲ್ಲಿ ಹಿಂದೂಗಳಿಗಲ್ಲದೇ ಬೇರ್ಯಾರಿಗೂ ಬದುಕುವ ಹಕ್ಕಿಲ್ಲ”ಎಂಬರ್ಥದಲ್ಲಿ ಬರೆದು ಹಾಕಿದ್ದರು.

ಅವರಲ್ಲಿ ಎಂತವರೆಲ್ಲಾ ಇದ್ದರೆಂದರೆ “ನನ್ನಿಂದ ವೈಯಕ್ತಿಕವಾಗಿ ಸಹಾಯ ಪಡೆದವರು, ನನ್ನದೇ ರಕ್ತ ಪಡೆದು ಜೀವವುಳಿಸಿಕೊಂಡವ, ಸಹೋದರಿಯ ಮದುವೆಗೆ ನನ್ನವಳ ಒಡವೆಗಳನ್ನು ಕಡಪಡಕೊಂಡವರು…. ಹೀಗೆ ಪಟ್ಟಿ ಮುಂದುವರಿಯುತ್ತದೆ. ಆದರೆ ನನ್ನ ಆ ಗೆಳೆಯರು ಯಾರೂ ಆರೆಸ್ಸೆಸ್ ಅಥವಾ ಸಂಘಪರಿವಾರದವರೂ ಅಲ್ಲ. ನನಗೀಗಲೂ ಅವರು ನನ್ನನ್ನು ದ್ವೇಷಿಸುತ್ತಾರೆಂದೆನಿಸುವುದಿಲ್ಲ.. ಮತ್ತು ಆಂತರ್ಯದಲ್ಲಿ ಅವರಿಗೆ ನಾನು ಪಾಲಿಸುವ ಧರ್ಮದ ಬಗ್ಗೆ ದ್ವೇಷವೂ ಇಲ್ಲ. ಹಾಗಾದರೆ ಅವರು ಯಾಕೆ ಹಾಗೆಲ್ಲಾ ಬರೆದುಕೊಂಡಿದ್ದಾರೆ..? ಇದನ್ನೇ ಸಮೂಹ ಸನ್ನಿಯೆನ್ನುವುದು.

ಅವರು ಏಕಾಂಗಿಯಾಗಿದ್ದಾಗ ಅಥವಾ ನನ್ನ ಜೊತೆಗಿರುವಾಗ ಹಾಗೆ ಎಂದೂ ಯೋಚಿಸಲಾರರು ಎಂದೇ ನನ್ನ ದೃಢವಾದ ನಂಬಿಕೆ. ಅವರಿಂದ ಸಮೂಹ ಸನ್ನಿಯ ಮನೋಸ್ಥಿತಿ ಹಾಗೆ ಬರೆಯಿಸಿತ್ತು ಎಂದೇ ನಾನು ನಂಬಿರುವೆ ಮತ್ತು ಮುಂದೆಯೂ ನಂಬುತ್ತೇನೆ. ನನಗೆ ಅವರ ಬಗ್ಗೆ ಕಿಂಚಿತ್ತೂ ದ್ವೇಷವಿಲ್ಲ. ಅವರಿಗೆ ನಾನಿಲ್ಲದ ಅವರ ಬಗ್ಗೆ ಯೋಚಿಸಲೂ ಸಾಧ್ಯವಾಗದು.

ಅಂತಹ ಕೆಲವು ಗೆಳೆಯರ ಬಳಿ ನಾನು ನೇರವಾಗಿ ಮಾತನಾಡುತ್ತ ಕೇಳಿದೆ.. “ಏನು ಮಾರಾಯ.. ನಾವು ಇಲ್ಲಿರುವುದು ನಿಮಗೆ ಅಷ್ಟೂ ಇಷ್ಟವಿಲ್ಲವೇ…?
ಯಾರು ಹಾಗೆಂದರು ಮಾರಾಯ..?
ಯಾರು ಹೇಳುವುದ್ಯಾಕೆ… ನಾನೇ ನೋಡಿದೆನಲ್ಲಾ….?
ಅದುವಾ….. ಅದು ನಿನ್ನಂತವರ ಬಗೆಗಲ್ಲ ಮಾರಾಯ…
ನಾನು ಮುಸ್ಲಿಮನೇ ಮಾರಾಯ..
‌ನಾನೂ ನಮಾಜು ಮಾಡುತ್ತೇನೆ, ನಾನೂ ದನದ ಮಾಂಸ ತಿನ್ನುತ್ತೇನೆ.

ಅದೇನು ನಮಗೆ ಗೊತ್ತಿಲ್ಲದ್ದಾ…?
ಮತ್ಯಾಕೆ ಹಾಗೆ ಬರೆದಿರಿ..?
ಏ ಅದೆಲ್ಲಾ ಬಿಡು ಮಾರಾಯ.. ನಿನ್ನನ್ನು ನಾವು ದ್ವೇಷಿಸಲಾಗುತ್ತಾ…?

ಸಾದತ್ ಹಸನ್ ಮಂಟೋ ಎಂಬ ಜಗತ್ಪ್ರಸಿದ್ದ ಮತ್ತು ಅತ್ಯಂತಿಕವಾದ ವಿವಾದಾತ್ಮಕ ಉರ್ದು ಸಣ್ಣ ಕತೆಗಾರನೂ ಇಂತಹದ್ದನ್ನೇ ಅನುಭವಿಸಿದ್ದ.‌ ದೇಶ ವಿಭಜನೆಯ ಕಾಲದ ಅತಿಮಾನುಷ ಕ್ರೌರ್ಯಗಳನ್ನು ಕಂಡು ಮಾನಸಿಕ ಸ್ಥಿಮಿತವನ್ನೇ ಕಳಕೊಂಡಿದ್ದ ಮಂಟೋ ವಿಭಜನೆಯ ಕಾಲದ ಕ್ರೌರ್ಯವನ್ನು, ಹಿಂಸೆಯನ್ನು ಬರೆದಷ್ಟು ಮನೋಜ್ಞವಾಗಿ ಇನ್ಯಾವ ಲೇಖಕನೂ ಬರೆದಿಲ್ಲ. ಮಂಟೋನ ಮಾನವೀಯ ಅಂತಃಕರಣ ಆ ಕಾಲದ ಇತರೆಲ್ಲಾ ಲೇಖಕರಿಗಿಂತಲೂ‌ ಆತನನ್ನು ಭಿನ್ನವಾಗಿ ನೋಡುವಂತೆ ಮಾಡುತ್ತದೆ. ಆತ ಜನರನ್ನು ಹಿಂದೂ ಮುಸಲ್ಮಾನರೆಂದು ಪ್ರತ್ಯೇಕಿಸಿ ನೋಡಲಿಲ್ಲ.‌ ಅದಕ್ಕೆ ಆತ ಬರೆದ ಸುಮಾರು ಇನ್ನೂರೈವತ್ತಕ್ಕೂ ಮಿಕ್ಕಿದ ಸಣ್ಣ ಕತೆಗಳಲ್ಲಿ ನೂರರಷ್ಟು ಕತೆಗಳು ಸಾಕ್ಷ್ಯವೊದಗಿಸುತ್ತದೆ. ಆತನ ಕೇವಲ ಎರಡು ಗೆರೆಯ ಕತೆ “ಮಿಸ್ಟೇಕ್” ಒಂದನ್ನೇ ನೋಡಿದರೆ ಸಾಕು.

“ಹೊಟ್ಟೆಯನ್ನು ಸೀಳಿದ ಚಾಕು ಸೀಳುತ್ತಾ ಬಂದು ಪೈಜಾಮದ ಲಾಡಿ ಬಿಚ್ಚಿಸಿತು…
ಅಯ್ಯೋ ಎಂತಹಾ ‘ಮಿಸ್ಟೇಕ್’ ಮಾಡಿ ಬಿಟ್ಟೆನೆಲ್ಲಾ”

ಈ ಕತೆಯನ್ನು ಇನ್ನೊಮ್ಮೆ ಓದಿ. ಒಂದು ವೇಳೆ ಸತ್ತವನು ಮುಸ್ಲಿಮನಾದರೆ ಕೊಂದವನೂ ಮುಸ್ಲಿಂ. ಒಂದು ವೇಳೆ ಸತ್ತವನು ಹಿಂದೂವಾದರೆ ಕೊಂದವನೂ ಹಿಂದೂ.

ಕೊಲೆಗಾರ ಸತ್ತವನ ಜನನಾಂಗ ನೋಡಿ ನಿರ್ಧರಿಸುತ್ತಾನೆ. ಇದರಲ್ಲಿ ಮಂಟೋನ ತಂತ್ರಗಾರಿಕೆಯೂ ಅಡಗಿದೆ. ಅವನೊಳಗಿನ ಅತ್ಯಂತ ಆರ್ದ್ರ ಹೃದಯದೊಳಗಿನ ತಲ್ಲಣವೂ ಇದೆ. ಮಂಟೋನಿಗೆ ಮನುಷ್ಯನ ಧರ್ಮ ಯಾವತ್ತೂ ಮಹತ್ವದ್ದಾಗಿರಲಿಲ್ಲ. ಆತನ ಕಾಳಜಿ ಕೇವಲ ಮನುಷ್ಯತ್ವ ಮಾತ್ರವಾಗಿತ್ತು. ಈ ಕತೆಯನ್ನು ಬರೆದಾಗ ಮಂಟೋ ಇನ್ನೂ ಭಾರತದಲ್ಲೇ ಇದ್ದ.

ಕೆಲದಿನಗಳ ಹಿಂದಷ್ಟೇ ಓರಗೆಯವರಾಗಿದ್ದವರು, ಗೆಳೆಯರಾಗಿದ್ದವರು ಇಂದು ಪರಸ್ಪರರನ್ನು ಕೊಲ್ಲುವ ಮಟ್ಟಿಗೆ ಅತಿಮಾನುಷ ಕ್ರೌರ್ಯವನ್ನು ಒಪ್ಪಿಕೊಂಡದ್ದಾದರೂ ಹೇಗೆ ಎಂದು ಯೋಚಿಸುತ್ತಲೇ ಆತ ಮಾನಸಿಕವಾಗಿ ಜರ್ಜರಿತನಾಗಿ ಬಿಟ್ಟಿದ್ದ.

ಹಿಂದೂ ಮುಸಲ್ಮಾನ ಸೋದರರ ಯುದ್ಧ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದ ಆ ದಿನಗಳಲ್ಲಿ ಮಂಟೋ ಮತ್ತು ಆತನ ಆತ್ಮೀಯ ಗೆಳೆಯನಾದ ಅಂದಿನ ಪ್ರಸಿದ್ಧ ಹಿಂದಿ ಸಿನಿಮಾ ನಟ ಶ್ಯಾಮ್‌ ಜೊತೆಗಿದ್ದಾಗ ಪಾಕಿಸ್ತಾನದ ರಾವಲ್ಪಿಂಡಿಯಿಂದ ಜೀವದ ಹಂಗು ತೊರೆದು ಬಂದಿದ್ದ ಸಿಖ್ಖ್ ಪರಿವಾರ ಶ್ಯಾಮ್‌ ಜೊತೆ ಮಾತಿಗೆ ನಿಂತಿತು. ಆ ಪರಿವಾರದ ಮುಖ್ಯಸ್ಥ ತಾನು ಕಂಡಿದ್ದ ಭೀಕರ ಹಿಂಸಾಚಾರದ ಕತೆಗಳನ್ನು ಇವರ ಮುಂದೆ ನಿರೂಪಿಸುತ್ತಿದ್ದಾಗ ಅದನ್ನು ಕೇಳುತ್ತಾ ಶ್ಯಾಮ್ ರೋಷದಿಂದ ಕುದಿಯುತ್ತಿದ್ದ. ಅತ್ಯಂತ ಸೂಕ್ಷ್ಮ ಮನಸ್ಸಿನ ಮಂಟೋ ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಮುಖದಲ್ಲಾದ ಏರಿಳಿತಗಳನ್ನೆಲ್ಲಾ ಗಮನಿಸಿದ್ದ. ಅವರು ಅಲ್ಲಿಂದ ಹೊರಟು ಹೋದ ಎಷ್ಟೋ ಹೊತ್ತಿನ ಬಳಿಕ ಮಂಟೋ “ನಾನೂ ಒಬ್ಬ ಮುಸಲ್ಮಾನ, ನಿನಗೆ ನನ್ನನ್ನು ಕೊಲ್ಲಬೇಕೆಂದೆನಿಸುವುದಿಲ್ಲವೇ…?”

ಶ್ಯಾಮ್ ತುಂಬಾ ಗಂಭೀರವಾಗಿ “ಇಲ್ಲ ಈಗ ಕೊಲ್ಲಲಾರೆ, ಆ ಸಿಖ್ಖನ ಬಾಯಿಯಿಂದ ಮುಸಲ್ಮಾನರು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದ್ದ ಕತೆಯನ್ನು ಕೇಳುತ್ತಿದ್ದಾಗ ನಿನ್ನನ್ನು ನಾನು ಕೊಲ್ಲಬಹುದಿತ್ತು”. ತನ್ನ ಪ್ರಾಣ ಸ್ನೇಹಿತ ಶ್ಯಾಮ್‌ನ ಬಾಯಿಯಿಂದ ಇಂತಹ ಮಾತುಗಳನ್ನು ಕೇಳಿಸಿದ ಮಂಟೋನಿಗೆ ಹೃದಯಾಘಾತವಾದಂತೆನಿಸುತ್ತದೆ. ಮುಂದೆ ಮಂಟೋ ಭಾರತ ತೊರೆಯಲು ಇದೇ ಕಾರಣವಾಗುತ್ತದೆ.

ಒಮ್ಮೆ ಇದ್ದಕ್ಕಿದ್ದಂತೆ ಮಂಟೋ ದೇಶ ತೊರೆಯುವ ವಿಚಾರ ಹೇಳಿದಾಗ ಶ್ಯಾಮ್ ಮತ್ತು ಮಂಟೋನ ಇನ್ನೋರ್ವ ಆತ್ಮೀಯ ಗೆಳೆಯನೂ ಆದ ಇನ್ನೋರ್ವ ಪ್ರಸಿದ್ಧ ನಟನೂ ಆದ ಅಶೋಕ್ ಕುಮಾರ್ ದಂಗಾಗಿಬಿಟ್ಟರು. ಮಂಟೋನ ಈ ದಿಡೀರ್ ತೀರ್ಮಾನಕ್ಕೆ ಕಾರಣವೇನೆಂದು ಅವರು ಕೇಳಿದಾಗ ಮಂಟೋ ತನ್ನ “ಪುರುಷಾರ್ಥ” ಕತೆಯನ್ನು ಓದುವಂತೆ ತಿಳಿಸುತ್ತಾನೆ. ಆತನ ಪುರುಷಾರ್ಥ ಕತೆ ಬೇರೇನೂ ಅಲ್ಲ.. ಅದು ಪಾಕಿಸ್ತಾನದಿಂದ ಜೀವದ ಹಂಗು ತೊರೆದು ಓಡಿ ಬಂದ ಸಿಖ್ ಪರಿವಾರ ಹೇಳಿದ ಕತೆ ಮತ್ತು ಶ್ಯಾಮ್ -ಮಂಟೋನ ನಡುವೆ ನಡೆದ ಮಾತುಕತೆಯೇ ಆಗಿದೆ. ಕಥಾ ನಾಯಕ ಮುಮ್ತಾಝ್ ಮತ್ತು ಆತನ ಸ್ನೇಹಿತ ಜುಗಲ್ ಮಧ್ಯೆ ನಡೆಯುವ ಮಾತುಕತೆಯಲ್ಲಿ “ಮಂಟೋ-ಶ್ಯಾಮ್‌ಗೆ ಕೇಳಿದ ಪ್ರಶ್ನೆಯನ್ನೂ, ಶ್ಯಾಮ್ ನೀಡಿದ ಉತ್ತರವನ್ನೂ” ಮಂಟೋ ಅತ್ಯಂತ ತಂತ್ರಪೂರ್ವಕವಾಗಿ ತಂದು ಕತೆ ಹೆಣೆದಿದ್ದ.

ವಾಸ್ತವದಲ್ಲಿ ಇಂತಹ ಮಾತುಕತೆಯಿಂದಾಗಿ ಮಂಟೋ ದೇಶ ತೊರೆಯಬಹುದೆಂಬ ಸಣ್ಣದೊಂದು ಸುಳಿವು ಸಿಕ್ಕಿದ್ದರೂ ಶ್ಯಾಮ್ ತನ್ನ ಮನದೊಳಗಿನ ರೋಷವನ್ನು ಮಂಟೋನ ಮುಂದೆ ಹೊರಗೆಡಹುತ್ತಿರಲಿಲ್ಲ. ಮಂಟೋ ದೇಶ ತೊರೆದ ಬಳಿಕ ತನ್ನ ಪ್ರೀತಿಯ ತಾಯ್ನಾಡನ್ನು, ಜೀವದ ಗೆಳೆಯರಾದ ಶ್ಯಾಮ್ ಮತ್ತು ಅಶೋಕ್ ಕುಮಾರರನ್ನು ನೆನೆದು ಬಹಳಷ್ಟು ಪರಿತಪಿಸಿದ. ಆತ ಇವರೊಂದಿಗೆ ಪತ್ರ ಸಂಪರ್ಕವಿಟ್ಟುಕೊಂಡಿದ್ದ. ಮಂಟೋ ಭಾರತ ತೊರೆದ ಬಳಿಕ ಆರ್ಥಿಕವಾಗಿ ಮತ್ತಷ್ಟು ಜರ್ಜರಿತನಾದ. ಶ್ಯಾಮ್ ಮತ್ತು ಅಶೋಕ್ ಕುಮಾರ್ ಮಂಟೋನಿಗೆಂದು ಆಗಾಗ ತುಸು ದುಡ್ಡನ್ನೂ ಕಳುಹಿಸುತ್ತಿದ್ದರು.

ಅಂದು ಮಂಟೋನ ಮುಂದೆ ಪಾಕಿಸ್ತಾನವೆಂಬ ಆಯ್ಕೆಯಿತ್ತು… ಇಂದು ನನ್ನ ಮುಂದಿರುವುದು ಡಿಟೆಂಶನ್‌ ಕ್ಯಾಂಪ್‌ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.‌ ತೆರೆದರೂ ನನ್ನ ಆಯ್ಕೆ ಖಂಡಿತಾ ಅದಾಗದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಇಂದು ನನ್ನೆದುರಿಗಿರುವುದು ಡಿಟಿಂಶನ್ ಕ್ಯಾಂಪ್ ಎಂಬ ಆಯ್ಕೆ ಮಾತ್ರ. ನನಗಾಗಿ ಪಾಕಿಸ್ತಾನದ ಬಾಗಿಲು ಯಾವತ್ತೂ ತೆರೆಯುವುದಿಲ್ಲ.” ಇದು ಸಹೃದಯರ ಮನ ಕಲಕುವ ಬರವಣಿಗೆ.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...