Homeಚಳವಳಿಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ.

- Advertisement -
- Advertisement -

| ಪುನೀತ್ ಅಪ್ಪು |

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು ನಿಕೃಷ್ಟ ಜನರಿಗೋಸ್ಕರ ಮರುಗಿದ, ಭಾರತದ ಕನವರಿಕೆಯಲ್ಲಿಯೇ ಪ್ರಾಣ ತ್ಯಜಿಸಿದ ಮಾಂಟೋ ಬರಿಯ ಕಥೆಗಾರನಲ್ಲ, ಆತನ ಬದುಕೇ ಒಂದು ರೂಪಕ. ಆತನ ಸಾವು ಇನ್ನೂ ವಿಚಿತ್ರ. ಮಾಂಟೋ ಯಾರು ಎಂದು ಯಾರಾದರೂ ಕೇಳಿದರೆ ಮಾಂಟೋ ಅಂದರೆ ಕಳ್ಳಭಟ್ಟಿ ಸಾರಾಯಿ ಎನ್ನಬಯಸುತ್ತೇನೆ. ಮಾಂಟೋನ ಕಥೆಗಳು ಕೂಡಾ ಆ ಸಾರಾಯಿಯಂತೆ ಸುಡುತ್ತಲೇ ಒಳಗಿಳಿಯುತ್ತವೆ. ಆದರೆ ಅದನ್ನು ಮೋಹಿಸಿದವನಿಗೆ ಮಾತ್ರ ಗೊತ್ತು ಅದರ ಮತ್ತು ಮತ್ತು ಗತ್ತು. ಬದುಕಬೇಕೆಂದು ಯಾರೂ ಅದನ್ನು ಕುಡಿಯುವುದಿಲ್ಲ. ಇದು ಸತ್ತವರ ಕಥೆ. ಬದುಕಿದವರು ಕಥೆಯಾಗುವುದಿಲ್ಲ. ನಾನು ಕುಡಿದರೂ ಸಾಯುತ್ತೇನೆ, ಕುಡಿಯದಿದ್ದರೂ ಸಾಯುತ್ತೇನೆ, ಅಮೇರಿಕಾದಿಂದ ಆಮದಾಗುವ ಈ ಗೋದಿಯ ಬೆಲೆ ನೋಡಿದರೆ ಮಾನ ಮರ್ಯಾದೆ ಇಲ್ಲದವರು ಮಾತ್ರ ಬದುಕಲು ಸಾಧ್ಯ ಎಂದಿದ್ದ ಮಾಂಟೋ.

ಸಾದತ್ ಹಸನ್ ಮಾಂಟೋ

ಮಾಂಟೋನ ಕೆಲವು ಸಣ್ಣ ಸಾಲುಗಳನ್ನು ಇಲ್ಲಿ ಕೊಟ್ಟಿರುವೆ.

1. ಶಾಶ್ವತ ರಜೆ.

.ಗಲಭೆಕೋರರ ಒಂದು ಗುಂಪು ಗಣಿಯತ್ತ ತೆರಳಿತು. ಸಿಕ್ಕಿ ಸಿಕ್ಕಿದವರನ್ನು ಹೊಡೆದು ಸಾಯಿಸ ತೊಡಗಿತು. ಒಬ್ಬ ಕಾರ್ಮಿಕ ಕೂಗಿಕೊಂಡ, ” ಅಯ್ಯೋ ನನ್ನ ಕೊಲ್ಲಬೇಡಿ, ನಾನು ರಜೆಯಲ್ಲಿ ಊರಿಗೆ ತೆರಳುತಿರುವೆ”.

2. ಪಠಾಣಿಸ್ತಾನ್

ಗಲಭೆಕೋರರ ತಂಡ ಒಬ್ಬನನ್ನು ತಡೆದು ನಿಲ್ಲಿಸಿತು.
“ಏಯ್ ಯಾರು ನೀನು ಇಂದೂವ ಅಥವಾ ಮುಸ್ಲಮೀನಾ”?
ವ್ಯಕ್ತಿ : ” ಹ್ಞಾಂ ಹ್ಞಾ.. ಮುಸ್ಲಮೀನ್ ಮುಸ್ಲಮೀನ್”
ತಂಡ : “ಓಹೋ ಹಾಗಾದರೆ ನಿನ್ನ ಪ್ರವಾದಿ ಯಾರು ಹೇಳು ನೋಡೋಣ”.
ವ್ಯಕ್ತಿ: “ಹ್ಞಾಂ? …. ಮಹಮ್ಮದ್ ಖಾನ್”
ತಂಡ : ” ಸರಿ, ಈತನನ್ನು ಬಿಟ್ಟು ಬಿಡೋಣ”.

3. ರೇಡಿಯೋ ವಾರ್ತೆ:

” ಪಂಜಾಬ್, ಗ್ವಾಲಿಯರ್ ಮತ್ತು ಮುಂಬಯಿಯ ಕೆಲವು ಗಲ್ಲಿಗಳಲ್ಲಿ ಜನರು ಸಿಹಿ ಹಂಚುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಹತ್ಯೆಯಾಗಿದೆ”.

4. ಮೂರ್ಖ.

ಆತನ ಆತ್ಮಹತ್ಯೆಯ ಬಗ್ಗೆ ಆತನ ಸ್ನೇಹಿತ ಹೀಗೆ ಹೇಳಿದ್ದ, ‘ ಎಂತಹಾ ಮೂರ್ಖ! ನಾನು ಅವನಲ್ಲಿ ಹೇಳುತ್ತಲೆ ಇದ್ದೆ, ಆ ಉದ್ದನೆಯ ಗಡ್ಡವನ್ನು ಬೋಳಿಸಿ, ಕೂದಲಿಗೆ ಕತ್ತರಿ ಹಾಕಿದ ಕೂಡಲೇ ಆತನೇನು ಧರ್ಮಭ್ರಷ್ಟನಾಗೋದಿಲ್ಲ. ನಮ್ಮ ಸಚ್ಚೇ ಗುರುವಿಗೆ ಶರಣಾಗಿ ಆತನ ಅನುಗ್ರಹವಿದ್ದರೆ ಆತ ತನ್ನ ಮೊದಲ ಸ್ವರೂಪಕ್ಕೆ ಬದಲಾಗಿ ಬಿಡುತ್ತಿದ್ದ’.

5. ಧೃಡತೆ.

‘ಯಾವ ಕಾರಣಕ್ಕೂ ನಾನು ಸಿಖ್ ಆಗಿ ಮತಾಂತರವಾಗಲಾರೆ, ಮರ್ಯಾದೆಯಿಂದ ನನ್ನ ಕ್ಷೌರಕತ್ತಿ ವಾಪಾಸ್ ಕೊಡಿ’

5. ಮಾನವೀಯತೆ.

‘ ಅಯ್ಯೋ ದಯವಿಟ್ಟು ನನ್ನ ಮಗಳನ್ನು ನನ್ನ ಕಣ್ಣೆದುರಿನಲ್ಲೇ ಕೊಲ್ಲದಿರಿ’.
‘ಸರಿ, ಸರಿ, ಆಕೆಯ ಬಟ್ಟೆ ಬಿಚ್ಚಿ ಓಡಿಸಿ’.

6. ದೇವರು ದೊಡ್ಡವನು !

ಆ ಸಂಜೆ ಕೊನೆಗೂ ಮುಗಿಯಿತು ಮತ್ತು ಆ ಮುಜ್ರಾ ನರ್ತಕಿಯ ಗಿರಾಕಿಗಳು ಒಬ್ಬೊಬ್ಬರೇ ಮನೆಗೆ ತೆರಳಿದರು.

ಮುಜ್ರಾವನ್ನು ವ್ಯವಸ್ಥೆ ಮಾಡಿದ್ದ ಮುದುಕ ನಿಟ್ಟುಸಿರುಬಿಟ್ಟ, ‘ ಆ ದೇಶದಲ್ಲಿ ಎಲ್ಲವನ್ನೂ ಕಳೆದುಕೊಂಡು ಇಲ್ಲಿಗೆ ಬಂದೆವು, ಆದರೂ ಅಲ್ಲಾಹ್ ಕೈ ಬಿಡಲಿಲ್ಲ. ಕೆಲವೇ ದಿನಗಳಲ್ಲಿ ನಮಗೆ ಒಳ್ಳೆಯ ದಿನಗಳು ಲಭಿಸಿದವು’.

7.ವಿಶ್ರಾಂತಿ.

‘ನೋಡು ಅವನಿನ್ನೂ ಸತ್ತಿಲ್ಲ. ಜೀವ ಇದ್ದ ಹಾಗೆ ಕಾಣ್ತಾ ಇದೆ’.
‘ ಏಯ್ ಇರ್ಲಿ ಬಿಡೊ, ನನಗೂ ಕೈ ನೋಯ್ರಾ ಇದೆ’.

8. ನ್ಯಾಯ.

‘ನೋಡು ಇದು ಅನ್ಯಾಯ. ಕಾಳಸಂತೆ ಬೆಲೆಯಲ್ಲಿ ಕಳಪೆ ಪೆಟ್ರೋಲ್ ಮಾರಾಟ ಮಾಡಿದ್ದೀಯ ನೀನು, ಒಂದೇ ಒಂದು ಅಂಗಡಿಯನ್ನು ಸುಡೋಕಾಗಿಲ್ಲ’.

9. ಅದೃಷ್ಟ.

‘ಏನ್ ದುರಾದೃಷ್ಟ ನೋಡೋ ನಂದು, ಅಷ್ಟೆಲ್ಲಾ ಕಷ್ಟಪಟ್ಟು ನನಗೆ ಸಿಕ್ಕಿದ್ದು ಈ ಒಂದು ಪೆಟ್ಟಿಗೆ ಮಾತ್ರ…. ಅದರಲ್ಲಿ ಕೂಡಾ ಸಿಕ್ಕಿದ್ದು ಹಂದಿ ಮಾಂಸ’.

10. ಕೇಳೋರೇ ಇಲ್ಲ

‘ಎಂತಹಾ ದರಿದ್ರ ಜನಗಳಪ್ಪಾ ಇವ್ರು, ಮಸೀದಿಯೊಳಗೆ ಬಿಸಾಡೋಕೆ ಅಂತ ಕಷ್ಟ ಪಟ್ಟು ಒಂದೈವತ್ತು ಹಂದಿಗಳನ್ನು ಕಡ್ದು ಕಾಯ್ತಾ ಇದ್ದೀನಿ, ಒಂದೇ ಒಂದು ಗಿರಾಕಿ ಸಿಗ್ತಾ ಇಲ್ಲ, ಗಡಿಯಾಚೆ ನೋಡು, ಅಲ್ಲಿನ ಜನ ದನದ ಮಾಂಸಕ್ಕೊಸ್ಕರ ಕ್ಯೂ ನಿಂತಿದ್ದಾರೆ, ಇಲ್ಲಿ ಹಂದಿ ಮಾಂಸನ ಕೇಳೋರೇ ಇಲ್ಲ’.

11. ತಪ್ಪನ್ನು ತಿದ್ದಲಾಯಿತು.

‘ಯಾರಯ್ಯ ನೀನು’

‘ಹರ್ ಹರ್ ಮಹಾದೇವ್, ಹರ್ ಹರ್ ಮಹದೇವ್, ಹರ್ ಹರ್ ಮಹಾದೇವ್’!
‘ನೀನು ಅದೇ ಎಂದು ಹೇಳೋದಕ್ಕೆ ಸಾಕ್ಷಿ ಏನಿದೆ’
‘ನನ್ನ ಹೆಸರು ಧರಮ್ ಚಂದ್’
‘ಅದು ಸಾಕ್ಷಿಯಾಗೋದಿಲ್ಲ’
‘ಸರಿ ಸರಿ, ನನಗೆ ನಾಲಕ್ಕು ವೇದಗಳೂ ಬಾಯಿಪಾಠ ಬರುತ್ತವೆ, ಬೇಕಿದ್ದರೆ ಪರೀಕ್ಷಿಸಿ’
‘ನಮಗೆ ವೇದ ಗೀದ ಎಲ್ಲಾ ಬರೋದಿಲ್ಲ, ಸಾಕ್ಷಿ ಕೊಡು’
‘ಏನೂ?!’
‘ನಿನ್ನ ಪೈಜಾಮ ಕೆಳಗೆ ಮಾಡು’
ಆತ ತನ್ನ ಪೈಜಾಮ ಕೆಳಗೆ ಜಾರಿಸಿದ ತಕ್ಷಣ ಅಲ್ಲೊಂದು ಬೊಬ್ಬೆ ಕೇಳಿಸಿತು,’ಕೊಲ್ಲಿ ಕೊಲ್ಲಿ ಆತನನ್ನು’.
‘ಅಯ್ಯೋ ದಯವಿಟ್ಟು ನಿಲ್ಲಿ, ನಾನು ನಿಮ್ಮ ಸಹೋದರ, ದೇವರಾಣೆಗೂ..’
‘ಹಾಗಾದರೆ ಇದೇನು?’
‘ನಾನು ಹಾದು ಬರಬೇಕಾಗಿದ್ದ ಆ ದಾರಿ ಶತ್ರುಗಳ ನಿಯಂತ್ರಣದಲ್ಲಿತ್ತು, ನಾನು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಅದಿಕ್ಕೆ ಇದೊಂದೇ ತಪ್ಪು ನಾನು ಮಾಡಿದ್ದು ನಮ್ಮ ಜೀವ ಉಳಿಸುವುದಕ್ಕೋಸ್ಕರ, ಮತ್ತೆಲ್ಲವೂ ಸರಿ ಇದೆ, ಇದೊಂದೇ ತಪ್ಪು ನಾನು ಮಾಡಿದ್ದು’.
‘ಸರಿ, ತಪ್ಪನ್ನು ತಿದ್ದಿ ಬಿಡಿ’.
ಹಾಗೆ, ತಪ್ಪು ನಿವಾರಿಸಲ್ಪಟ್ಟಿತು, ಜೊತೆಗೆ ಧರಮ್ ಚಂದನು ಕೂಡಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...