Homeಚಳವಳಿಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ.

- Advertisement -
- Advertisement -

| ಪುನೀತ್ ಅಪ್ಪು |

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು ನಿಕೃಷ್ಟ ಜನರಿಗೋಸ್ಕರ ಮರುಗಿದ, ಭಾರತದ ಕನವರಿಕೆಯಲ್ಲಿಯೇ ಪ್ರಾಣ ತ್ಯಜಿಸಿದ ಮಾಂಟೋ ಬರಿಯ ಕಥೆಗಾರನಲ್ಲ, ಆತನ ಬದುಕೇ ಒಂದು ರೂಪಕ. ಆತನ ಸಾವು ಇನ್ನೂ ವಿಚಿತ್ರ. ಮಾಂಟೋ ಯಾರು ಎಂದು ಯಾರಾದರೂ ಕೇಳಿದರೆ ಮಾಂಟೋ ಅಂದರೆ ಕಳ್ಳಭಟ್ಟಿ ಸಾರಾಯಿ ಎನ್ನಬಯಸುತ್ತೇನೆ. ಮಾಂಟೋನ ಕಥೆಗಳು ಕೂಡಾ ಆ ಸಾರಾಯಿಯಂತೆ ಸುಡುತ್ತಲೇ ಒಳಗಿಳಿಯುತ್ತವೆ. ಆದರೆ ಅದನ್ನು ಮೋಹಿಸಿದವನಿಗೆ ಮಾತ್ರ ಗೊತ್ತು ಅದರ ಮತ್ತು ಮತ್ತು ಗತ್ತು. ಬದುಕಬೇಕೆಂದು ಯಾರೂ ಅದನ್ನು ಕುಡಿಯುವುದಿಲ್ಲ. ಇದು ಸತ್ತವರ ಕಥೆ. ಬದುಕಿದವರು ಕಥೆಯಾಗುವುದಿಲ್ಲ. ನಾನು ಕುಡಿದರೂ ಸಾಯುತ್ತೇನೆ, ಕುಡಿಯದಿದ್ದರೂ ಸಾಯುತ್ತೇನೆ, ಅಮೇರಿಕಾದಿಂದ ಆಮದಾಗುವ ಈ ಗೋದಿಯ ಬೆಲೆ ನೋಡಿದರೆ ಮಾನ ಮರ್ಯಾದೆ ಇಲ್ಲದವರು ಮಾತ್ರ ಬದುಕಲು ಸಾಧ್ಯ ಎಂದಿದ್ದ ಮಾಂಟೋ.

ಸಾದತ್ ಹಸನ್ ಮಾಂಟೋ

ಮಾಂಟೋನ ಕೆಲವು ಸಣ್ಣ ಸಾಲುಗಳನ್ನು ಇಲ್ಲಿ ಕೊಟ್ಟಿರುವೆ.

1. ಶಾಶ್ವತ ರಜೆ.

.ಗಲಭೆಕೋರರ ಒಂದು ಗುಂಪು ಗಣಿಯತ್ತ ತೆರಳಿತು. ಸಿಕ್ಕಿ ಸಿಕ್ಕಿದವರನ್ನು ಹೊಡೆದು ಸಾಯಿಸ ತೊಡಗಿತು. ಒಬ್ಬ ಕಾರ್ಮಿಕ ಕೂಗಿಕೊಂಡ, ” ಅಯ್ಯೋ ನನ್ನ ಕೊಲ್ಲಬೇಡಿ, ನಾನು ರಜೆಯಲ್ಲಿ ಊರಿಗೆ ತೆರಳುತಿರುವೆ”.

2. ಪಠಾಣಿಸ್ತಾನ್

ಗಲಭೆಕೋರರ ತಂಡ ಒಬ್ಬನನ್ನು ತಡೆದು ನಿಲ್ಲಿಸಿತು.
“ಏಯ್ ಯಾರು ನೀನು ಇಂದೂವ ಅಥವಾ ಮುಸ್ಲಮೀನಾ”?
ವ್ಯಕ್ತಿ : ” ಹ್ಞಾಂ ಹ್ಞಾ.. ಮುಸ್ಲಮೀನ್ ಮುಸ್ಲಮೀನ್”
ತಂಡ : “ಓಹೋ ಹಾಗಾದರೆ ನಿನ್ನ ಪ್ರವಾದಿ ಯಾರು ಹೇಳು ನೋಡೋಣ”.
ವ್ಯಕ್ತಿ: “ಹ್ಞಾಂ? …. ಮಹಮ್ಮದ್ ಖಾನ್”
ತಂಡ : ” ಸರಿ, ಈತನನ್ನು ಬಿಟ್ಟು ಬಿಡೋಣ”.

3. ರೇಡಿಯೋ ವಾರ್ತೆ:

” ಪಂಜಾಬ್, ಗ್ವಾಲಿಯರ್ ಮತ್ತು ಮುಂಬಯಿಯ ಕೆಲವು ಗಲ್ಲಿಗಳಲ್ಲಿ ಜನರು ಸಿಹಿ ಹಂಚುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಹತ್ಯೆಯಾಗಿದೆ”.

4. ಮೂರ್ಖ.

ಆತನ ಆತ್ಮಹತ್ಯೆಯ ಬಗ್ಗೆ ಆತನ ಸ್ನೇಹಿತ ಹೀಗೆ ಹೇಳಿದ್ದ, ‘ ಎಂತಹಾ ಮೂರ್ಖ! ನಾನು ಅವನಲ್ಲಿ ಹೇಳುತ್ತಲೆ ಇದ್ದೆ, ಆ ಉದ್ದನೆಯ ಗಡ್ಡವನ್ನು ಬೋಳಿಸಿ, ಕೂದಲಿಗೆ ಕತ್ತರಿ ಹಾಕಿದ ಕೂಡಲೇ ಆತನೇನು ಧರ್ಮಭ್ರಷ್ಟನಾಗೋದಿಲ್ಲ. ನಮ್ಮ ಸಚ್ಚೇ ಗುರುವಿಗೆ ಶರಣಾಗಿ ಆತನ ಅನುಗ್ರಹವಿದ್ದರೆ ಆತ ತನ್ನ ಮೊದಲ ಸ್ವರೂಪಕ್ಕೆ ಬದಲಾಗಿ ಬಿಡುತ್ತಿದ್ದ’.

5. ಧೃಡತೆ.

‘ಯಾವ ಕಾರಣಕ್ಕೂ ನಾನು ಸಿಖ್ ಆಗಿ ಮತಾಂತರವಾಗಲಾರೆ, ಮರ್ಯಾದೆಯಿಂದ ನನ್ನ ಕ್ಷೌರಕತ್ತಿ ವಾಪಾಸ್ ಕೊಡಿ’

5. ಮಾನವೀಯತೆ.

‘ ಅಯ್ಯೋ ದಯವಿಟ್ಟು ನನ್ನ ಮಗಳನ್ನು ನನ್ನ ಕಣ್ಣೆದುರಿನಲ್ಲೇ ಕೊಲ್ಲದಿರಿ’.
‘ಸರಿ, ಸರಿ, ಆಕೆಯ ಬಟ್ಟೆ ಬಿಚ್ಚಿ ಓಡಿಸಿ’.

6. ದೇವರು ದೊಡ್ಡವನು !

ಆ ಸಂಜೆ ಕೊನೆಗೂ ಮುಗಿಯಿತು ಮತ್ತು ಆ ಮುಜ್ರಾ ನರ್ತಕಿಯ ಗಿರಾಕಿಗಳು ಒಬ್ಬೊಬ್ಬರೇ ಮನೆಗೆ ತೆರಳಿದರು.

ಮುಜ್ರಾವನ್ನು ವ್ಯವಸ್ಥೆ ಮಾಡಿದ್ದ ಮುದುಕ ನಿಟ್ಟುಸಿರುಬಿಟ್ಟ, ‘ ಆ ದೇಶದಲ್ಲಿ ಎಲ್ಲವನ್ನೂ ಕಳೆದುಕೊಂಡು ಇಲ್ಲಿಗೆ ಬಂದೆವು, ಆದರೂ ಅಲ್ಲಾಹ್ ಕೈ ಬಿಡಲಿಲ್ಲ. ಕೆಲವೇ ದಿನಗಳಲ್ಲಿ ನಮಗೆ ಒಳ್ಳೆಯ ದಿನಗಳು ಲಭಿಸಿದವು’.

7.ವಿಶ್ರಾಂತಿ.

‘ನೋಡು ಅವನಿನ್ನೂ ಸತ್ತಿಲ್ಲ. ಜೀವ ಇದ್ದ ಹಾಗೆ ಕಾಣ್ತಾ ಇದೆ’.
‘ ಏಯ್ ಇರ್ಲಿ ಬಿಡೊ, ನನಗೂ ಕೈ ನೋಯ್ರಾ ಇದೆ’.

8. ನ್ಯಾಯ.

‘ನೋಡು ಇದು ಅನ್ಯಾಯ. ಕಾಳಸಂತೆ ಬೆಲೆಯಲ್ಲಿ ಕಳಪೆ ಪೆಟ್ರೋಲ್ ಮಾರಾಟ ಮಾಡಿದ್ದೀಯ ನೀನು, ಒಂದೇ ಒಂದು ಅಂಗಡಿಯನ್ನು ಸುಡೋಕಾಗಿಲ್ಲ’.

9. ಅದೃಷ್ಟ.

‘ಏನ್ ದುರಾದೃಷ್ಟ ನೋಡೋ ನಂದು, ಅಷ್ಟೆಲ್ಲಾ ಕಷ್ಟಪಟ್ಟು ನನಗೆ ಸಿಕ್ಕಿದ್ದು ಈ ಒಂದು ಪೆಟ್ಟಿಗೆ ಮಾತ್ರ…. ಅದರಲ್ಲಿ ಕೂಡಾ ಸಿಕ್ಕಿದ್ದು ಹಂದಿ ಮಾಂಸ’.

10. ಕೇಳೋರೇ ಇಲ್ಲ

‘ಎಂತಹಾ ದರಿದ್ರ ಜನಗಳಪ್ಪಾ ಇವ್ರು, ಮಸೀದಿಯೊಳಗೆ ಬಿಸಾಡೋಕೆ ಅಂತ ಕಷ್ಟ ಪಟ್ಟು ಒಂದೈವತ್ತು ಹಂದಿಗಳನ್ನು ಕಡ್ದು ಕಾಯ್ತಾ ಇದ್ದೀನಿ, ಒಂದೇ ಒಂದು ಗಿರಾಕಿ ಸಿಗ್ತಾ ಇಲ್ಲ, ಗಡಿಯಾಚೆ ನೋಡು, ಅಲ್ಲಿನ ಜನ ದನದ ಮಾಂಸಕ್ಕೊಸ್ಕರ ಕ್ಯೂ ನಿಂತಿದ್ದಾರೆ, ಇಲ್ಲಿ ಹಂದಿ ಮಾಂಸನ ಕೇಳೋರೇ ಇಲ್ಲ’.

11. ತಪ್ಪನ್ನು ತಿದ್ದಲಾಯಿತು.

‘ಯಾರಯ್ಯ ನೀನು’

‘ಹರ್ ಹರ್ ಮಹಾದೇವ್, ಹರ್ ಹರ್ ಮಹದೇವ್, ಹರ್ ಹರ್ ಮಹಾದೇವ್’!
‘ನೀನು ಅದೇ ಎಂದು ಹೇಳೋದಕ್ಕೆ ಸಾಕ್ಷಿ ಏನಿದೆ’
‘ನನ್ನ ಹೆಸರು ಧರಮ್ ಚಂದ್’
‘ಅದು ಸಾಕ್ಷಿಯಾಗೋದಿಲ್ಲ’
‘ಸರಿ ಸರಿ, ನನಗೆ ನಾಲಕ್ಕು ವೇದಗಳೂ ಬಾಯಿಪಾಠ ಬರುತ್ತವೆ, ಬೇಕಿದ್ದರೆ ಪರೀಕ್ಷಿಸಿ’
‘ನಮಗೆ ವೇದ ಗೀದ ಎಲ್ಲಾ ಬರೋದಿಲ್ಲ, ಸಾಕ್ಷಿ ಕೊಡು’
‘ಏನೂ?!’
‘ನಿನ್ನ ಪೈಜಾಮ ಕೆಳಗೆ ಮಾಡು’
ಆತ ತನ್ನ ಪೈಜಾಮ ಕೆಳಗೆ ಜಾರಿಸಿದ ತಕ್ಷಣ ಅಲ್ಲೊಂದು ಬೊಬ್ಬೆ ಕೇಳಿಸಿತು,’ಕೊಲ್ಲಿ ಕೊಲ್ಲಿ ಆತನನ್ನು’.
‘ಅಯ್ಯೋ ದಯವಿಟ್ಟು ನಿಲ್ಲಿ, ನಾನು ನಿಮ್ಮ ಸಹೋದರ, ದೇವರಾಣೆಗೂ..’
‘ಹಾಗಾದರೆ ಇದೇನು?’
‘ನಾನು ಹಾದು ಬರಬೇಕಾಗಿದ್ದ ಆ ದಾರಿ ಶತ್ರುಗಳ ನಿಯಂತ್ರಣದಲ್ಲಿತ್ತು, ನಾನು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಅದಿಕ್ಕೆ ಇದೊಂದೇ ತಪ್ಪು ನಾನು ಮಾಡಿದ್ದು ನಮ್ಮ ಜೀವ ಉಳಿಸುವುದಕ್ಕೋಸ್ಕರ, ಮತ್ತೆಲ್ಲವೂ ಸರಿ ಇದೆ, ಇದೊಂದೇ ತಪ್ಪು ನಾನು ಮಾಡಿದ್ದು’.
‘ಸರಿ, ತಪ್ಪನ್ನು ತಿದ್ದಿ ಬಿಡಿ’.
ಹಾಗೆ, ತಪ್ಪು ನಿವಾರಿಸಲ್ಪಟ್ಟಿತು, ಜೊತೆಗೆ ಧರಮ್ ಚಂದನು ಕೂಡಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...