Homeಚಳವಳಿಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ.

- Advertisement -
- Advertisement -

| ಪುನೀತ್ ಅಪ್ಪು |

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು ನಿಕೃಷ್ಟ ಜನರಿಗೋಸ್ಕರ ಮರುಗಿದ, ಭಾರತದ ಕನವರಿಕೆಯಲ್ಲಿಯೇ ಪ್ರಾಣ ತ್ಯಜಿಸಿದ ಮಾಂಟೋ ಬರಿಯ ಕಥೆಗಾರನಲ್ಲ, ಆತನ ಬದುಕೇ ಒಂದು ರೂಪಕ. ಆತನ ಸಾವು ಇನ್ನೂ ವಿಚಿತ್ರ. ಮಾಂಟೋ ಯಾರು ಎಂದು ಯಾರಾದರೂ ಕೇಳಿದರೆ ಮಾಂಟೋ ಅಂದರೆ ಕಳ್ಳಭಟ್ಟಿ ಸಾರಾಯಿ ಎನ್ನಬಯಸುತ್ತೇನೆ. ಮಾಂಟೋನ ಕಥೆಗಳು ಕೂಡಾ ಆ ಸಾರಾಯಿಯಂತೆ ಸುಡುತ್ತಲೇ ಒಳಗಿಳಿಯುತ್ತವೆ. ಆದರೆ ಅದನ್ನು ಮೋಹಿಸಿದವನಿಗೆ ಮಾತ್ರ ಗೊತ್ತು ಅದರ ಮತ್ತು ಮತ್ತು ಗತ್ತು. ಬದುಕಬೇಕೆಂದು ಯಾರೂ ಅದನ್ನು ಕುಡಿಯುವುದಿಲ್ಲ. ಇದು ಸತ್ತವರ ಕಥೆ. ಬದುಕಿದವರು ಕಥೆಯಾಗುವುದಿಲ್ಲ. ನಾನು ಕುಡಿದರೂ ಸಾಯುತ್ತೇನೆ, ಕುಡಿಯದಿದ್ದರೂ ಸಾಯುತ್ತೇನೆ, ಅಮೇರಿಕಾದಿಂದ ಆಮದಾಗುವ ಈ ಗೋದಿಯ ಬೆಲೆ ನೋಡಿದರೆ ಮಾನ ಮರ್ಯಾದೆ ಇಲ್ಲದವರು ಮಾತ್ರ ಬದುಕಲು ಸಾಧ್ಯ ಎಂದಿದ್ದ ಮಾಂಟೋ.

ಸಾದತ್ ಹಸನ್ ಮಾಂಟೋ

ಮಾಂಟೋನ ಕೆಲವು ಸಣ್ಣ ಸಾಲುಗಳನ್ನು ಇಲ್ಲಿ ಕೊಟ್ಟಿರುವೆ.

1. ಶಾಶ್ವತ ರಜೆ.

.ಗಲಭೆಕೋರರ ಒಂದು ಗುಂಪು ಗಣಿಯತ್ತ ತೆರಳಿತು. ಸಿಕ್ಕಿ ಸಿಕ್ಕಿದವರನ್ನು ಹೊಡೆದು ಸಾಯಿಸ ತೊಡಗಿತು. ಒಬ್ಬ ಕಾರ್ಮಿಕ ಕೂಗಿಕೊಂಡ, ” ಅಯ್ಯೋ ನನ್ನ ಕೊಲ್ಲಬೇಡಿ, ನಾನು ರಜೆಯಲ್ಲಿ ಊರಿಗೆ ತೆರಳುತಿರುವೆ”.

2. ಪಠಾಣಿಸ್ತಾನ್

ಗಲಭೆಕೋರರ ತಂಡ ಒಬ್ಬನನ್ನು ತಡೆದು ನಿಲ್ಲಿಸಿತು.
“ಏಯ್ ಯಾರು ನೀನು ಇಂದೂವ ಅಥವಾ ಮುಸ್ಲಮೀನಾ”?
ವ್ಯಕ್ತಿ : ” ಹ್ಞಾಂ ಹ್ಞಾ.. ಮುಸ್ಲಮೀನ್ ಮುಸ್ಲಮೀನ್”
ತಂಡ : “ಓಹೋ ಹಾಗಾದರೆ ನಿನ್ನ ಪ್ರವಾದಿ ಯಾರು ಹೇಳು ನೋಡೋಣ”.
ವ್ಯಕ್ತಿ: “ಹ್ಞಾಂ? …. ಮಹಮ್ಮದ್ ಖಾನ್”
ತಂಡ : ” ಸರಿ, ಈತನನ್ನು ಬಿಟ್ಟು ಬಿಡೋಣ”.

3. ರೇಡಿಯೋ ವಾರ್ತೆ:

” ಪಂಜಾಬ್, ಗ್ವಾಲಿಯರ್ ಮತ್ತು ಮುಂಬಯಿಯ ಕೆಲವು ಗಲ್ಲಿಗಳಲ್ಲಿ ಜನರು ಸಿಹಿ ಹಂಚುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಹತ್ಯೆಯಾಗಿದೆ”.

4. ಮೂರ್ಖ.

ಆತನ ಆತ್ಮಹತ್ಯೆಯ ಬಗ್ಗೆ ಆತನ ಸ್ನೇಹಿತ ಹೀಗೆ ಹೇಳಿದ್ದ, ‘ ಎಂತಹಾ ಮೂರ್ಖ! ನಾನು ಅವನಲ್ಲಿ ಹೇಳುತ್ತಲೆ ಇದ್ದೆ, ಆ ಉದ್ದನೆಯ ಗಡ್ಡವನ್ನು ಬೋಳಿಸಿ, ಕೂದಲಿಗೆ ಕತ್ತರಿ ಹಾಕಿದ ಕೂಡಲೇ ಆತನೇನು ಧರ್ಮಭ್ರಷ್ಟನಾಗೋದಿಲ್ಲ. ನಮ್ಮ ಸಚ್ಚೇ ಗುರುವಿಗೆ ಶರಣಾಗಿ ಆತನ ಅನುಗ್ರಹವಿದ್ದರೆ ಆತ ತನ್ನ ಮೊದಲ ಸ್ವರೂಪಕ್ಕೆ ಬದಲಾಗಿ ಬಿಡುತ್ತಿದ್ದ’.

5. ಧೃಡತೆ.

‘ಯಾವ ಕಾರಣಕ್ಕೂ ನಾನು ಸಿಖ್ ಆಗಿ ಮತಾಂತರವಾಗಲಾರೆ, ಮರ್ಯಾದೆಯಿಂದ ನನ್ನ ಕ್ಷೌರಕತ್ತಿ ವಾಪಾಸ್ ಕೊಡಿ’

5. ಮಾನವೀಯತೆ.

‘ ಅಯ್ಯೋ ದಯವಿಟ್ಟು ನನ್ನ ಮಗಳನ್ನು ನನ್ನ ಕಣ್ಣೆದುರಿನಲ್ಲೇ ಕೊಲ್ಲದಿರಿ’.
‘ಸರಿ, ಸರಿ, ಆಕೆಯ ಬಟ್ಟೆ ಬಿಚ್ಚಿ ಓಡಿಸಿ’.

6. ದೇವರು ದೊಡ್ಡವನು !

ಆ ಸಂಜೆ ಕೊನೆಗೂ ಮುಗಿಯಿತು ಮತ್ತು ಆ ಮುಜ್ರಾ ನರ್ತಕಿಯ ಗಿರಾಕಿಗಳು ಒಬ್ಬೊಬ್ಬರೇ ಮನೆಗೆ ತೆರಳಿದರು.

ಮುಜ್ರಾವನ್ನು ವ್ಯವಸ್ಥೆ ಮಾಡಿದ್ದ ಮುದುಕ ನಿಟ್ಟುಸಿರುಬಿಟ್ಟ, ‘ ಆ ದೇಶದಲ್ಲಿ ಎಲ್ಲವನ್ನೂ ಕಳೆದುಕೊಂಡು ಇಲ್ಲಿಗೆ ಬಂದೆವು, ಆದರೂ ಅಲ್ಲಾಹ್ ಕೈ ಬಿಡಲಿಲ್ಲ. ಕೆಲವೇ ದಿನಗಳಲ್ಲಿ ನಮಗೆ ಒಳ್ಳೆಯ ದಿನಗಳು ಲಭಿಸಿದವು’.

7.ವಿಶ್ರಾಂತಿ.

‘ನೋಡು ಅವನಿನ್ನೂ ಸತ್ತಿಲ್ಲ. ಜೀವ ಇದ್ದ ಹಾಗೆ ಕಾಣ್ತಾ ಇದೆ’.
‘ ಏಯ್ ಇರ್ಲಿ ಬಿಡೊ, ನನಗೂ ಕೈ ನೋಯ್ರಾ ಇದೆ’.

8. ನ್ಯಾಯ.

‘ನೋಡು ಇದು ಅನ್ಯಾಯ. ಕಾಳಸಂತೆ ಬೆಲೆಯಲ್ಲಿ ಕಳಪೆ ಪೆಟ್ರೋಲ್ ಮಾರಾಟ ಮಾಡಿದ್ದೀಯ ನೀನು, ಒಂದೇ ಒಂದು ಅಂಗಡಿಯನ್ನು ಸುಡೋಕಾಗಿಲ್ಲ’.

9. ಅದೃಷ್ಟ.

‘ಏನ್ ದುರಾದೃಷ್ಟ ನೋಡೋ ನಂದು, ಅಷ್ಟೆಲ್ಲಾ ಕಷ್ಟಪಟ್ಟು ನನಗೆ ಸಿಕ್ಕಿದ್ದು ಈ ಒಂದು ಪೆಟ್ಟಿಗೆ ಮಾತ್ರ…. ಅದರಲ್ಲಿ ಕೂಡಾ ಸಿಕ್ಕಿದ್ದು ಹಂದಿ ಮಾಂಸ’.

10. ಕೇಳೋರೇ ಇಲ್ಲ

‘ಎಂತಹಾ ದರಿದ್ರ ಜನಗಳಪ್ಪಾ ಇವ್ರು, ಮಸೀದಿಯೊಳಗೆ ಬಿಸಾಡೋಕೆ ಅಂತ ಕಷ್ಟ ಪಟ್ಟು ಒಂದೈವತ್ತು ಹಂದಿಗಳನ್ನು ಕಡ್ದು ಕಾಯ್ತಾ ಇದ್ದೀನಿ, ಒಂದೇ ಒಂದು ಗಿರಾಕಿ ಸಿಗ್ತಾ ಇಲ್ಲ, ಗಡಿಯಾಚೆ ನೋಡು, ಅಲ್ಲಿನ ಜನ ದನದ ಮಾಂಸಕ್ಕೊಸ್ಕರ ಕ್ಯೂ ನಿಂತಿದ್ದಾರೆ, ಇಲ್ಲಿ ಹಂದಿ ಮಾಂಸನ ಕೇಳೋರೇ ಇಲ್ಲ’.

11. ತಪ್ಪನ್ನು ತಿದ್ದಲಾಯಿತು.

‘ಯಾರಯ್ಯ ನೀನು’

‘ಹರ್ ಹರ್ ಮಹಾದೇವ್, ಹರ್ ಹರ್ ಮಹದೇವ್, ಹರ್ ಹರ್ ಮಹಾದೇವ್’!
‘ನೀನು ಅದೇ ಎಂದು ಹೇಳೋದಕ್ಕೆ ಸಾಕ್ಷಿ ಏನಿದೆ’
‘ನನ್ನ ಹೆಸರು ಧರಮ್ ಚಂದ್’
‘ಅದು ಸಾಕ್ಷಿಯಾಗೋದಿಲ್ಲ’
‘ಸರಿ ಸರಿ, ನನಗೆ ನಾಲಕ್ಕು ವೇದಗಳೂ ಬಾಯಿಪಾಠ ಬರುತ್ತವೆ, ಬೇಕಿದ್ದರೆ ಪರೀಕ್ಷಿಸಿ’
‘ನಮಗೆ ವೇದ ಗೀದ ಎಲ್ಲಾ ಬರೋದಿಲ್ಲ, ಸಾಕ್ಷಿ ಕೊಡು’
‘ಏನೂ?!’
‘ನಿನ್ನ ಪೈಜಾಮ ಕೆಳಗೆ ಮಾಡು’
ಆತ ತನ್ನ ಪೈಜಾಮ ಕೆಳಗೆ ಜಾರಿಸಿದ ತಕ್ಷಣ ಅಲ್ಲೊಂದು ಬೊಬ್ಬೆ ಕೇಳಿಸಿತು,’ಕೊಲ್ಲಿ ಕೊಲ್ಲಿ ಆತನನ್ನು’.
‘ಅಯ್ಯೋ ದಯವಿಟ್ಟು ನಿಲ್ಲಿ, ನಾನು ನಿಮ್ಮ ಸಹೋದರ, ದೇವರಾಣೆಗೂ..’
‘ಹಾಗಾದರೆ ಇದೇನು?’
‘ನಾನು ಹಾದು ಬರಬೇಕಾಗಿದ್ದ ಆ ದಾರಿ ಶತ್ರುಗಳ ನಿಯಂತ್ರಣದಲ್ಲಿತ್ತು, ನಾನು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಅದಿಕ್ಕೆ ಇದೊಂದೇ ತಪ್ಪು ನಾನು ಮಾಡಿದ್ದು ನಮ್ಮ ಜೀವ ಉಳಿಸುವುದಕ್ಕೋಸ್ಕರ, ಮತ್ತೆಲ್ಲವೂ ಸರಿ ಇದೆ, ಇದೊಂದೇ ತಪ್ಪು ನಾನು ಮಾಡಿದ್ದು’.
‘ಸರಿ, ತಪ್ಪನ್ನು ತಿದ್ದಿ ಬಿಡಿ’.
ಹಾಗೆ, ತಪ್ಪು ನಿವಾರಿಸಲ್ಪಟ್ಟಿತು, ಜೊತೆಗೆ ಧರಮ್ ಚಂದನು ಕೂಡಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...