Homeಮುಖಪುಟಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು...! - ರಾಹುಲ್ ಗಾಂಧಿ

ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು…! – ರಾಹುಲ್ ಗಾಂಧಿ

ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದ್ದು, ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ

- Advertisement -
- Advertisement -

“ಸದ್ದಾಂ ಹುಸೇನ್ ಮತ್ತು ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ಹೇಳಿರುವ ರಾಹುಲ್ ಗಾಂಧಿ, ಮತ್ತೊಮ್ಮೆ ಭಾರತದ ಪ್ರಜಾಪ್ರಭುತ್ವ ಅವನತಿಯತ್ತ ಸಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರೌನ್ ವಿಶ್ವವಿದ್ಯಾಲಯದ ಅಶುತೋಷ್ ವರ್ಷನಿ ಅವರೊಂದಿಗಿನ ಆನ್‌ಲೈನ್ ಸಂವಾದದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಇರಾಕ್‌ನ ಸರ್ವಾಧಿಕಾರಿ ಸದ್ದಾಂ ಹುಸೇನ್ ಹಾಗೂ ಲಿಬಿಯಾದ ಮುಅಮ್ಮರ್ ಗಡಾಫಿ ಸಹ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂಬ ಅಧ್ಯಯನದ ವರದಿಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “ಸದ್ದಾಂ ಹುಸೇನ್ ಮತ್ತು ಗಡಾಫಿ ಸಹ ಚುನಾವಣೆ ನಡೆಸುತ್ತಿದ್ದರು. ಜೊತೆಗೆ ಅದರಲ್ಲಿ ಗೆಲುವನ್ನೂ ಸಾಧಿಸುತ್ತಿದ್ದರು. ಅಲ್ಲಿ ಮತದಾನ ನಡೆಯುತ್ತಿರುವುದು ಮುಖ್ಯವಲ್ಲ. ಆದರೆ ಆ ಮತವನ್ನು ರಕ್ಷಿಸಲು ಯಾವುದೇ ಸಾಂವಿಧಾನಿಕ ಚೌಕಟ್ಟು ಇರಲಿಲ್ಲ ಎಂಬುದು ಮುಖ್ಯ” ಎಂದು ಹೇಳಿದರು.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

“ಚುನಾವಣೆ ಎಂಬುದು ಜನರು ಮತ ಯಂತ್ರಗಳಲ್ಲಿ ಬಟನ್ ಒತ್ತುವುದು ಮಾತ್ರವಲ್ಲ. ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದೆಯೇ? ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ. ಮತದಾನದಲ್ಲಿ ಈ ಎಲ್ಲ ವಿಷಯಗಳು ಮುಖ್ಯವೆನಿಸುತ್ತದೆ” ಎಂದು ಹೇಳಿದರು.

ಭಾರತದ ಪ್ರಜಾಪ್ರಭುತ್ವ ಈಗ ಚುನಾಯಿತ ನಿರಂಕುಶಾಧಿಪತ್ಯದ ಸ್ಥಿತಿಗೆ ಇಳಿದಿದೆ ಎಂದು ಸ್ವೀಡನ್‌ನ ಗೊಟೆನ್‌ಬರ್ಗ್ ವಿಶ್ವವಿದ್ಯಾಲಯದ ವಿ-ಡೆಮ್ ಸ್ವತಂತ್ರ ಸಂಶೋಧನಾ ಸಂಸ್ಥೆಯ ಪ್ರಜಾಪ್ರಭುತ್ವ ವರದಿ 2021ರಲ್ಲಿ ಉಲ್ಲೇಖಿಸಿದೆ.

ಅಮೆರಿಕದ ಫ್ರೀಡಮ್ ಹೌಸ್ ಭಾರತವನ್ನು ‘ಮುಕ್ತ ದೇಶ’ದಿಂದ ‘ಭಾಗಶಃ ಮುಕ್ತ ದೇಶ’ ಎನ್ನುವ ದರ್ಜೆಗೆ ಇಳಿಸಿ, ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂದು ವರದಿ ಬಿಡುಗಡೆಗೊಳಿಸಿತ್ತು.

ಈ ವರದಿಗಳನ್ನು ಆಧರಿಸಿ, ರಾಹುಲ್ ಗಾಂಧಿ ಭಾರತ ಇನ್ನುಮುಂದೆ ಪ್ರಜಾಪ್ರಭುತ್ವ ರಾಷ್ಟ್ರವಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...