Homeಮುಖಪುಟಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು...! - ರಾಹುಲ್ ಗಾಂಧಿ

ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು…! – ರಾಹುಲ್ ಗಾಂಧಿ

ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದ್ದು, ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ

- Advertisement -
- Advertisement -

“ಸದ್ದಾಂ ಹುಸೇನ್ ಮತ್ತು ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ಹೇಳಿರುವ ರಾಹುಲ್ ಗಾಂಧಿ, ಮತ್ತೊಮ್ಮೆ ಭಾರತದ ಪ್ರಜಾಪ್ರಭುತ್ವ ಅವನತಿಯತ್ತ ಸಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರೌನ್ ವಿಶ್ವವಿದ್ಯಾಲಯದ ಅಶುತೋಷ್ ವರ್ಷನಿ ಅವರೊಂದಿಗಿನ ಆನ್‌ಲೈನ್ ಸಂವಾದದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಇರಾಕ್‌ನ ಸರ್ವಾಧಿಕಾರಿ ಸದ್ದಾಂ ಹುಸೇನ್ ಹಾಗೂ ಲಿಬಿಯಾದ ಮುಅಮ್ಮರ್ ಗಡಾಫಿ ಸಹ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂಬ ಅಧ್ಯಯನದ ವರದಿಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “ಸದ್ದಾಂ ಹುಸೇನ್ ಮತ್ತು ಗಡಾಫಿ ಸಹ ಚುನಾವಣೆ ನಡೆಸುತ್ತಿದ್ದರು. ಜೊತೆಗೆ ಅದರಲ್ಲಿ ಗೆಲುವನ್ನೂ ಸಾಧಿಸುತ್ತಿದ್ದರು. ಅಲ್ಲಿ ಮತದಾನ ನಡೆಯುತ್ತಿರುವುದು ಮುಖ್ಯವಲ್ಲ. ಆದರೆ ಆ ಮತವನ್ನು ರಕ್ಷಿಸಲು ಯಾವುದೇ ಸಾಂವಿಧಾನಿಕ ಚೌಕಟ್ಟು ಇರಲಿಲ್ಲ ಎಂಬುದು ಮುಖ್ಯ” ಎಂದು ಹೇಳಿದರು.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

“ಚುನಾವಣೆ ಎಂಬುದು ಜನರು ಮತ ಯಂತ್ರಗಳಲ್ಲಿ ಬಟನ್ ಒತ್ತುವುದು ಮಾತ್ರವಲ್ಲ. ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದೆಯೇ? ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ. ಮತದಾನದಲ್ಲಿ ಈ ಎಲ್ಲ ವಿಷಯಗಳು ಮುಖ್ಯವೆನಿಸುತ್ತದೆ” ಎಂದು ಹೇಳಿದರು.

ಭಾರತದ ಪ್ರಜಾಪ್ರಭುತ್ವ ಈಗ ಚುನಾಯಿತ ನಿರಂಕುಶಾಧಿಪತ್ಯದ ಸ್ಥಿತಿಗೆ ಇಳಿದಿದೆ ಎಂದು ಸ್ವೀಡನ್‌ನ ಗೊಟೆನ್‌ಬರ್ಗ್ ವಿಶ್ವವಿದ್ಯಾಲಯದ ವಿ-ಡೆಮ್ ಸ್ವತಂತ್ರ ಸಂಶೋಧನಾ ಸಂಸ್ಥೆಯ ಪ್ರಜಾಪ್ರಭುತ್ವ ವರದಿ 2021ರಲ್ಲಿ ಉಲ್ಲೇಖಿಸಿದೆ.

ಅಮೆರಿಕದ ಫ್ರೀಡಮ್ ಹೌಸ್ ಭಾರತವನ್ನು ‘ಮುಕ್ತ ದೇಶ’ದಿಂದ ‘ಭಾಗಶಃ ಮುಕ್ತ ದೇಶ’ ಎನ್ನುವ ದರ್ಜೆಗೆ ಇಳಿಸಿ, ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂದು ವರದಿ ಬಿಡುಗಡೆಗೊಳಿಸಿತ್ತು.

ಈ ವರದಿಗಳನ್ನು ಆಧರಿಸಿ, ರಾಹುಲ್ ಗಾಂಧಿ ಭಾರತ ಇನ್ನುಮುಂದೆ ಪ್ರಜಾಪ್ರಭುತ್ವ ರಾಷ್ಟ್ರವಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...