Homeಮುಖಪುಟರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

- Advertisement -
- Advertisement -

ಬಿಜೆಪಿ ಸಂಸದೆ ಹಾಗೂ ಮಾಲೇಗಾಂವ್‌ ಬಾಂಬ್‌ ಸ್ಫೋಟ ಆರೋಪಿ ಪ್ರಗ್ಯಾ ಸಿಂಗ್‌ ಠಾಕೂರ್‌ರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿಗೆ ನೇಮಕ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವ್ಯಂಗ್ಯ ಮತ್ತು ಟೀಕೆಗಳು ವ್ಯಕ್ತವಾಗಿವೆ. ಪ್ರಗ್ಯಾ ಸಿಂಗ್‌ ವಿರುದ್ಧ ಟ್ವಿಟ್ಟಿಗರು ಕಿಡಿಕಾರಿದ್ದು, ಕೇಂದ್ರದ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ 21 ಸದಸ್ಯರ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಮಾಲೇಗಾಂವ್‌ ಬಾಂಬ್‌ ಸ್ಫೋಟ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‌ರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿ ಸರ್ಕಾರವನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ ಕ್ಷೇತ್ರದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್‌, ವಿವಾದಾತ್ಮಕ ಹೇಳಿಕೆಗಳಿಂದಲೇ ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದಾರೆ. ಸಾಧ್ವಿಯನ್ನು ಸಮಿತಿಗೆ ನೇಮಕ ಮಾಡಿರುವ ಬಿಜೆಪಿ ಸರ್ಕಾರದ ಕ್ರಮ ದೌರ್ಭಾಗ್ಯಪೂರ್ಣವಾಗಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಅಲ್ಲದೇ ಕಮಲನಾಥ್‌ ಸರ್ಕಾರದಲ್ಲಿ ಸಚಿವರಾಗಿರುವ ಪಿ.ಸಿ.ಶರ್ಮಾ, ಬಿಜೆಪಿಯ ಕ್ರಮವನ್ನು ಖಂಡಿಸಿದ್ದಾರೆ. ಬಿಜೆಪಿ ಹೇಳೋದೊಂದು ಮಾಡೋದೊಂದು ಮಾಡುತ್ತೆ. ಆಡುವ ಮಾತು ಮತ್ತು ಬಿಜೆಪಿಯ ಕ್ರಿಯೆಗೂ ಸಂಬಂಧವೇ ಇರುವುದಿಲ್ಲ. ಮಾಲೇಗಾಂವ್‌ ಸ್ಫೋಟದ ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಆದರೆ ತನಿಖೆ ಮಾಡದೇ, ಈಗ ರಕ್ಷಣಾ ಸಚಿವಾಲಯದ ಸಮಿತಿಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

ಬಾಂಬ್‌ ಸ್ಫೋಟ ಆರೋಪಿ ಪ್ರಗ್ಯಾ ಠಾಕೂರ್‌ರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿಗೆ ನೇಮಿಸಲಾಗಿದೆ. ಇದು ”ಮಾಸ್ಟರ್ ಸ್ಟ್ರೋಕ್..! ಗಡಿಗಳನ್ನು ರಕ್ಷಿಸಲು ಅಂತಿಮವಾಗಿ ಪ್ರಗ್ಯಾ ಅವರ ‘ಶಾರ್ಪ್’ ಮತ್ತು ‘ಮಾರಕ ಶಕ್ತಿ’ಯನ್ನು ಬಳಸಬಹುದು ಎಂದು ಟ್ವಿಟ್ಟಿಗರು ಕೇಂದ್ರದ ಕಾಲೆಳೆದಿದ್ದಾರೆ. ಬಾಂಬ್‌ ತಯಾರಿಕೆ ವಿಧಾನವನ್ನೂ ಕಲಿಯಬಹುದು ಎಂದು ಕೆಲವರು ಟ್ವೀಟ್‌ ಮಾಡಿ, ಮೋದಿ ಸರ್ಕಾರವನ್ನು ಅಪಹಾಸ್ಯ ಮಾಡಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಪ್ರಗ್ಯಾ ಸಿಂಗ್‌ ಠಾಕೂರ್‌, ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ  ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಂತರ ಅದು ತೀವ್ರ ವಿವಾದಕ್ಕೀಡಾಗುತ್ತಿದ್ದಂತೆ ಹೇಳಿಕೆಯನ್ನು ವಾಪಸ್‌ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...