Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...