Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...