Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...