Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...