Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...