Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...