Homeಮುಖಪುಟತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

‘ಪೆರಿಯಾರ್ ದ್ರಾವಿಡರ್‌‌ ಕಳಗಂ ಚಳವಳಿಯ ನಾಯಕರಷ್ಟೇ ಅಲ್ಲ. ಅವರು ತಮಿಳರಿಗೇ ನಾಯಕರು. ಇಂಥ ವ್ಯಕ್ತಿಯ ಪ್ರತಿಮೆಯನ್ನು ವಿರೂಪಗೊಳಿಸಿರುವವರನ್ನು ಗಡಿಪಾರು ಮಾಡಬೇಕು‘ - ಸ್ಟಾಲಿನ್

- Advertisement -
- Advertisement -

ಸಮಾಜ ಸುಧಾರಣಾವಾದಿ ನಾಯಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದಿದ್ದು, ತಮಿಳುನಾಡಿನ ರಾಜಕೀಯ ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳುನಾಡಿನ ಇನಾಮ್‌ಕೊಲತ್ತೂರ್‌ನ ಸಮತುವಾಪುರಂ ಕಾಲೋನಿಯಲ್ಲಿರುವ ಪೆರಿಯಾರ್‌ ಪ್ರತಿಮೆಗೆ ಕೇಸರಿ ಬಣ್ಣ ಬಳಿಯಲಾಗಿದೆ. ಪ್ರತಿಮೆಯ ಬಳಿ ಚಪ್ಪಲಿ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಪ್ರತಿಮೆಯನ್ನು ವಿರೂಪಗೊಳಿಸಿರುವ ಇಂಥ ವಿಧ್ವಂಸಕ ಕೃತ್ಯದ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ಘಟನೆಯಿಂದ ತೀವ್ರ ಆಕ್ರೋಶಗೊಂಡ ಸ್ಥಳೀಯರು ದಿಢೀರನೆ ಪ್ರತಿಭಟನೆ ನಡೆಸಿದರು. ಇದರಿಂದ ದಿಂಡಿಗಲ್‌ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥವಾಯಿತು. ವಿಧ್ವಂಸಕ ಕೃತ್ಯವನ್ನು ವಿರೋಧಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಪ್ರಕರಣದ ಬಗ್ಗೆ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಸೇರಿದಂತೆ, ವಿವಿಧ ಪಕ್ಷಗಳ ರಾಜಕೀಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪೆರಿಯಾರ್ ದ್ರಾವಿಡರ್‌‌ ಕಳಗಂ ಚಳವಳಿಯ ನಾಯಕರಷ್ಟೇ ಅಲ್ಲ. ಅವರು ತಮಿಳರಿಗೇ ನಾಯಕರು. ಇಂಥ ವ್ಯಕ್ತಿಯ ಪ್ರತಿಮೆಯನ್ನು ವಿರೂಪಗೊಳಿಸಿರುವವರನ್ನು ಗಡಿಪಾರು ಮಾಡಬೇಕು‘ ಎಂದು ಸ್ಟಾಲಿನ್ ಹೇಳಿದ್ದಾರೆ.  ಪೆರಿಯಾರ್ ಅವರನ್ನು ಅವಮಾನಿಸುತ್ತಿದ್ದೇವೆಂದು ಭಾವಿಸಿ ಇಂತಹ ಕೆಲಸಗಳನ್ನು ಮಾಡುವವರು ತಮ್ಮನ್ನು ತಾವೇ ಅವಮಾನಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ತಮಿಳುನಾಡು ಉಪಮುಖ್ಯಮಂತ್ರಿ ಓ.ಪನ್ನಿಸೆಲ್ವಂ ಪ್ರತಿಮೆ ವಿರೂಪಗೊಳಸಿದವರ ವಿರುದ್ಧ ತಮಿಳುನಾಡು ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣ ಕುರಿತು ಅನೇಕ ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಿಎಂಕೆ ನಾಯಕ ಎಸ್ ರಾಮದಾಸ್, ಎಂಡಿಎಂಕೆ ಸಂಸ್ಥಾಪಕ ಮತ್ತು ರಾಜ್ಯಸಭಾ ಸಂಸದ ವೈಕೊ, ಎಎಂಎಂಕೆ ನಾಯಕ ಮತ್ತು ಸ್ವತಂತ್ರ ಶಾಸಕ ಟಿ ಟಿ ವಿ ದಿನಕರನ್ ಮತ್ತು ವಿಸಿಕೆ ನಾಯಕ ಥೋಲ್ ತಿರುಮಾವಾಲವನ್, ಸಂಸದರು ಸಹ ಪೆರಿಯಾರ್ ಅವರ ಪ್ರತಿಮೆಗನ್ನು ಗುರಿಯಾಗಿಸಿಕೊಂಡ ಇತ್ತೀಚಿಗೆ ನಡೆದ ಘಟನೆಗಳನ್ನು ಟೀಕಿಸಿದರು ಮತ್ತು ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಹಿಂದ ಕೂಡ ಇದೇ ರೀತಿ ಕೊಯಮತ್ತೂರ್‌‌ ಸುಂದರಪುರಂ ಬಳಿಯ ಪೆರಿಯಾರ್ ಪ್ರತಿಮೆಯೊಂದಕ್ಕೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇದು ರಾಜ್ಯದಲ್ಲಿ ಎರಡನೇ ಪ್ರಕರಣವಾಗಿದೆ.


ಇದನ್ನೂ ಓದಿ: ತಮಿಳುನಾಡು: ಪೆರಿಯಾರ್‌ ಪ್ರತಿಮೆಗೆ ಕೇಸರಿ ಬಣ್ಣ ಎರಚಿ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...