Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...