Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...