Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....