Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...