Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...