Homeಕರ್ನಾಟಕಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಗಣರಾಜ್ಯೋತ್ಸವದ ಕರ್ನಾಟಕ ಟ್ಯಾಬ್ಲೊದಲ್ಲಿ ಕೇಸರಿ ಧ್ವಜ!: ಕನ್ನಡವಿಲ್ಲದ್ದಕ್ಕೆ ಕನ್ನಡಿಗರ ಕಿಡಿ

ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ. ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆಯುವ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೊ ಆಯ್ಕೆಯಾಗಿರುವುದು ಸರಿಯಷ್ಟೇ. ಅದರ ಪೂರ್ವಭಾವಿ ಪ್ರದರ್ಶನ ಜನವರಿ 23 ರಂದು ಜರುಗಿದ್ದು ಕರ್ನಾಟಕ ಟ್ಯಾಬ್ಲೊದಲ್ಲಿ ಕನ್ನಡವಿಲ್ಲ, ಕನ್ನಡ ಬಾವುಟವಿಲ್ಲ, ಆದರೆ ಕೇಸರಿ ಧ್ವಜಗಳು ರಾರಾಜಿಸಿವೆ ಎಂಬ ಆರೋಪ ಕೇಳಿಬಂದಿದೆ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

‘ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯ ದ್ಯೋತಕವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಸ್ಥಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ’ ಎಂದು ಪೂರ್ವಭಾವಿ ಮೆರವಣಿಗೆಯ ಚಿತ್ರವನ್ನು ಕರ್ನಾಟಕ ವಾರ್ತಾ ಇಲಾಖೆ ಪ್ರಕಟಿಸಿದೆ. ಟ್ಯಾಬ್ಲೊದ ಮುಂಭಾಗದಲ್ಲಿ ಕರ್ನಾಟಕ್ ಎಂದು ಹಿಂದಿಯಲ್ಲಿ ಬರೆದಿದ್ದು. ಟ್ಯಾಬ್ಲೊ ಅಕ್ಕ ಪಕ್ಕದ ಮೆರವಣಿಗೆಯಲ್ಲಿದ್ದವರು ಕೇಸರಿ ಧ್ವಜ ಹಿಡಿದಿರುವುದು ಕಂಡುಬಂದಿದೆ.

ಈ ಕುರಿತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸರೋವರ್ ಬೆಂಕಿಕೆರೆ “ಕನ್ನಡ ಬಾವುಟ ಎಲ್ಲಿ? ಇದೇನು ಒಕ್ಕೂಟ ದೇಶವೋ ಅಥವಾ ಏನು? ಗಣತಂತ್ರ ಅಂದ್ರೆ ಒಂದು ಧರ್ಮದ ಬಾವುಟ ಹಾಕುವುದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ಗ್ರಾಹಕ ಒಕ್ಕೂಟದ ಅರುಣ್ ಜಾವಗಲ್ “ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ರಾಜ್ಯಗಳ ಬಿತ್ತಿ ಚಿತ್ರಗಳ ಮುಂದೆ ಹಿಂದಿಯಲ್ಲಿ ಆ ರಾಜ್ಯದ ಹೆಸರು ಇರಬೇಕು ಇಲ್ಲದಿದ್ದರೆ ಬಿತ್ತಿಚಿತ್ರ ಪ್ರದರ್ಶನಕ್ಕೆ ಅವಕಾಶವೇ ಇರುವುದಿಲ್ಲಾ ಎನ್ನುವ ನಿಯಮವನ್ನು ಪ್ರತಿ ವರ್ಷ ಕೇಂದ್ರ ಸರಕಾರ ಹೊರಡಿಸುತ್ತದೆ. ಮುಂದುವರೆದು ರಾಜ್ಯದ ಭಾಷೆಯನ್ನು ಸ್ಥಬ್ಧಚಿತ್ರದ ಮುಂಭಾಗದಲ್ಲಿ ಹಾಕುವ ಅವಕಾಶವಿಲ್ಲ. ಬೇಕಿದ್ರೆ ಅಕ್ಕಪಕ್ಕದಲ್ಲಿ ಹಾಕಬಹುದು ಎನ್ನುವ ಅವಕಾಶವನ್ನು ದೆಹಲಿಯ ದೊರೆಗಳು ನೀಡಿದ್ದಾರೆ ಎನ್ನುವುದನ್ನು ಕಂಡು ಸಧ್ಯಕ್ಕೆ ಖುಷಿಪಡಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕನ್ನಡ ಚಿತ್ರನಿರ್ದೇಶಕ ಮಂಸೋರೆ “ಭಾರತ ಎಂಬ ದೇಶ ವಿವಿಧ ಭಾಷೆಗಳ ರಾಜ್ಯಗಳ ಒಕ್ಕೂಟವೋ ಅಥವಾ ಹಿಂದಿ ಭಾಷೆಯ ರಾಜ್ಯಗಳ ಒಕ್ಕೂಟವೋ? ಇದೇನಾ ಗಣತಂತ್ರ? ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದ ಮುಂದೆ ಕನ್ನಡ ಕಾಣುವುದಕ್ಕೆ ಈ ಒಕ್ಕೂಟ ದೇಶದಲ್ಲಿ ಅವಕಾಶವಿಲ್ಲವೇ? ಕನ್ನಡ ಡಿಂಡಿಮ ಬಾರಿಸಲು ಇನ್ನು ಎಷ್ಟು ವರ್ಷಗಳು ಕಾಯಬೇಕು?” ಎಂದು ಪ್ರಶ್ನಸಿದ್ದಾರೆ.

ಇನ್ಮೇಲೆ ರಿಪಬ್ಲಿಕ್ ಡೇ ಪರೇಡ್ ಗೆ ಟ್ಯಾಬ್ಲಾಯ್ಡ್ ಗಳು ನಮ್ಮ ನಾಡಿನಿಂದ ಹೋಗದಂತೆ ಮಾಡೋಣ. 3 ನುಡಿಗಳ ಪದ್ದತಿ ಪಾಲಿಸದೆ ಸಂವಿಧಾನವನ್ನ ಬದಲಾಯಿಸಿದ್ದಾರೆ. ಸಂವಿಧಾನ ಸಂವಿಧಾನ ಅನ್ನೋರು ಎಲ್ಲಿದ್ದೀರಿ? ನಾವುಗಳು ಎರಡು ನುಡಿಗಳ ಪದ್ದತಿ ಬೇಕು, ಸಂಸ್ಕೃತ, ಹಿಂದಿ ಹೇರಿಕೆ ಬೇಡ ಅಂದೊಡನೆ ಸಂವಿಧಾನ, ದೇಶ, ಒಗ್ಗಟ್ಟು, ಓಬ್ಬಟ್ಟು – ಬದನೆಕಾಯಿ ಅನ್ನುವವರು ಮಾತಾಡಿ ಇದರ ಬಗ್ಗೆ ಎಂದು ದ್ರಾವಿಡ ಹೋರಾಟಗಾರ ಅಭಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಹಾಕಬಾರದೆಂದು ಆದೇಶಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...