Homeಮುಖಪುಟಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

ಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

- Advertisement -
- Advertisement -

ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಾರೆ.

ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಈ ಕುರಿತು ಮಾತನಾಡಿದ ಚರ್ಚ್‌ನ ಪಾದ್ರಿ ನರ್ಬು ಅಮಲಿಯಾರ್, ಭಾನುವಾರದ ಪ್ರಾರ್ಥನೆ ಮುಗಿದ ಕೂಡಲೇ ಜನರ ಗುಂಪು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ಬಂದಿದೆ. ನಾವು ನಮ್ಮ ಭಾನುವಾರದ ಪ್ರಾರ್ಥನೆಯನ್ನು ಮುಗಿಸುವಾಗ ಮಧ್ಯಾಹ್ನ 3 ಗಂಟೆಯಾಗಿತ್ತು. ಈ ವ್ಯಕ್ತಿಗಳು ಎಲ್ಲಿಂದಲೋ ಬಂದರು, ಜೈ ಶ್ರೀ ರಾಮ್ ಎಂದು ಕೂಗಿದರು. ಗುಂಪಿನಲ್ಲಿ ಕನಿಷ್ಠ 25 ಮಂದಿ ಇದ್ದರು ಮತ್ತು ಅವರಲ್ಲಿ ಕೆಲವರು ಧ್ವಜ ಹಿಡಿದುಕೊಂಡು ಚರ್ಚ್‌ನ ಮೇಲೆ ಹತ್ತಿದ್ದಾರೆ ಎಂದು ಹೇಳಿದ್ದಾರೆ.

ದುಷ್ಕರ್ಮಿಗಳ ಗುಂಪಿನಲ್ಲಿದ್ದ ಕೆಲವರನ್ನು ನಾನು ಗುರುತಿಸಿದ್ದು, ಅವರು ನೆರೆಯ ಗ್ರಾಮದವರಾಗಿದ್ದರು. ಅವರಲ್ಲಿ ಕೆಲವರ ಹೆಸರುಗಳೂ ನನಗೆ ಗೊತ್ತು. ಇದು ಸರಿಯಲ್ಲ ಎಂದು ಅವರಿಗೆ ತಿಳಿಹೇಳಲು ನಾನು ಪ್ರಯತ್ನಿಸಿದ್ದೆ. ನಾವು ಇಲ್ಲಿ ಕೇವಲ ದೇವರ ಆರಾಧಕರು ಮತ್ತು ಅವರು ನಮಗೆ ತೊಂದರೆ ನೀಡಬಾರದು ಎಂದು ನಾನು ಕೇಳಿಕೊಂಡಿದ್ದ, ಆದರೆ ಅವರು ಕೇಳಲಿಲ್ಲ. ಅಲ್ಲೇನು ನಡೆಯುತ್ತಿದೆ ಎನ್ನುವುದು ನನಗೆ ಅರ್ಥವಾಗಿರಲಿಲ್ಲ, ಹೀಗೆ ಹಿಂದೆಂದೂ ಸಂಭವಿಸಿರಲಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಜಬುವಾ ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಮ್ಮ ತಂಡ ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದೆ. ಏನಾಯಿತು ಎಂದು ವಿಚಾರಿಸಿದೆವು. ಇದು ಒಬ್ಬ ವ್ಯಕ್ತಿಯ ಮನೆ ಅವನು ಪ್ರಾರ್ಥನೆಗಾಗಿ ಬಳಸುತ್ತಾನೆ, ಅದು ಚರ್ಚ್ ಅಲ್ಲ. ಹಾಗಾಗಿ ನಾವು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಲ್ಲ. ವ್ಯಕ್ತಿಯು ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದು ಮನೆ ಎಂಬ ಪೊಲೀಸರ ಹೇಳಿಕೆಯನ್ನು ಪಾದ್ರಿ ನಿರಾಕರಿಸಿದ್ದು, ಇದು ಪ್ರಾರ್ಥನಾಲಯ, ನಾನು 2016 ರಲ್ಲಿ ಪ್ರಾರಂಭಿಸಿದ ಚರ್ಚ್. ಪ್ರತಿ ಭಾನುವಾರ 30-40 ಜನರು ಇಲ್ಲಿ ಪ್ರಾರ್ಥನೆಗೆ ಬರುತ್ತಾರೆ. ಇದು ಪೂಜಾ ಸ್ಥಳವಾಗಿದೆ. ನನ್ನ ಮನೆ ಪ್ರತ್ಯೇಕವಾಗಿದೆ. ಯುವಕರ ಗುಂಪು ನಂತರ ನನ್ನನ್ನು ಕರೆದು ಕ್ಷಮೆಯಾಚಿಸಿದರು. ಹಾಗಾಗಿ ನಾನು ಇನ್ನೂ ದೂರು ದಾಖಲಿಸಿಲ್ಲ. ನಾನು ನನ್ನ ಗ್ರಾಮದ ಸರಪಂಚರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...