Homeಮುಖಪುಟಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

ಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

- Advertisement -
- Advertisement -

ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಾರೆ.

ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಈ ಕುರಿತು ಮಾತನಾಡಿದ ಚರ್ಚ್‌ನ ಪಾದ್ರಿ ನರ್ಬು ಅಮಲಿಯಾರ್, ಭಾನುವಾರದ ಪ್ರಾರ್ಥನೆ ಮುಗಿದ ಕೂಡಲೇ ಜನರ ಗುಂಪು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ಬಂದಿದೆ. ನಾವು ನಮ್ಮ ಭಾನುವಾರದ ಪ್ರಾರ್ಥನೆಯನ್ನು ಮುಗಿಸುವಾಗ ಮಧ್ಯಾಹ್ನ 3 ಗಂಟೆಯಾಗಿತ್ತು. ಈ ವ್ಯಕ್ತಿಗಳು ಎಲ್ಲಿಂದಲೋ ಬಂದರು, ಜೈ ಶ್ರೀ ರಾಮ್ ಎಂದು ಕೂಗಿದರು. ಗುಂಪಿನಲ್ಲಿ ಕನಿಷ್ಠ 25 ಮಂದಿ ಇದ್ದರು ಮತ್ತು ಅವರಲ್ಲಿ ಕೆಲವರು ಧ್ವಜ ಹಿಡಿದುಕೊಂಡು ಚರ್ಚ್‌ನ ಮೇಲೆ ಹತ್ತಿದ್ದಾರೆ ಎಂದು ಹೇಳಿದ್ದಾರೆ.

ದುಷ್ಕರ್ಮಿಗಳ ಗುಂಪಿನಲ್ಲಿದ್ದ ಕೆಲವರನ್ನು ನಾನು ಗುರುತಿಸಿದ್ದು, ಅವರು ನೆರೆಯ ಗ್ರಾಮದವರಾಗಿದ್ದರು. ಅವರಲ್ಲಿ ಕೆಲವರ ಹೆಸರುಗಳೂ ನನಗೆ ಗೊತ್ತು. ಇದು ಸರಿಯಲ್ಲ ಎಂದು ಅವರಿಗೆ ತಿಳಿಹೇಳಲು ನಾನು ಪ್ರಯತ್ನಿಸಿದ್ದೆ. ನಾವು ಇಲ್ಲಿ ಕೇವಲ ದೇವರ ಆರಾಧಕರು ಮತ್ತು ಅವರು ನಮಗೆ ತೊಂದರೆ ನೀಡಬಾರದು ಎಂದು ನಾನು ಕೇಳಿಕೊಂಡಿದ್ದ, ಆದರೆ ಅವರು ಕೇಳಲಿಲ್ಲ. ಅಲ್ಲೇನು ನಡೆಯುತ್ತಿದೆ ಎನ್ನುವುದು ನನಗೆ ಅರ್ಥವಾಗಿರಲಿಲ್ಲ, ಹೀಗೆ ಹಿಂದೆಂದೂ ಸಂಭವಿಸಿರಲಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಜಬುವಾ ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಮ್ಮ ತಂಡ ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದೆ. ಏನಾಯಿತು ಎಂದು ವಿಚಾರಿಸಿದೆವು. ಇದು ಒಬ್ಬ ವ್ಯಕ್ತಿಯ ಮನೆ ಅವನು ಪ್ರಾರ್ಥನೆಗಾಗಿ ಬಳಸುತ್ತಾನೆ, ಅದು ಚರ್ಚ್ ಅಲ್ಲ. ಹಾಗಾಗಿ ನಾವು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಲ್ಲ. ವ್ಯಕ್ತಿಯು ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದು ಮನೆ ಎಂಬ ಪೊಲೀಸರ ಹೇಳಿಕೆಯನ್ನು ಪಾದ್ರಿ ನಿರಾಕರಿಸಿದ್ದು, ಇದು ಪ್ರಾರ್ಥನಾಲಯ, ನಾನು 2016 ರಲ್ಲಿ ಪ್ರಾರಂಭಿಸಿದ ಚರ್ಚ್. ಪ್ರತಿ ಭಾನುವಾರ 30-40 ಜನರು ಇಲ್ಲಿ ಪ್ರಾರ್ಥನೆಗೆ ಬರುತ್ತಾರೆ. ಇದು ಪೂಜಾ ಸ್ಥಳವಾಗಿದೆ. ನನ್ನ ಮನೆ ಪ್ರತ್ಯೇಕವಾಗಿದೆ. ಯುವಕರ ಗುಂಪು ನಂತರ ನನ್ನನ್ನು ಕರೆದು ಕ್ಷಮೆಯಾಚಿಸಿದರು. ಹಾಗಾಗಿ ನಾನು ಇನ್ನೂ ದೂರು ದಾಖಲಿಸಿಲ್ಲ. ನಾನು ನನ್ನ ಗ್ರಾಮದ ಸರಪಂಚರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...