Homeಮುಖಪುಟ'ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ 'ಧಾರ್ಮಿಕ ಚಿತ್ರ': ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ...

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

- Advertisement -
- Advertisement -

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...