Homeಮುಖಪುಟ'ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ 'ಧಾರ್ಮಿಕ ಚಿತ್ರ': ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ...

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

- Advertisement -
- Advertisement -

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...