Homeಮುಖಪುಟ'ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ 'ಧಾರ್ಮಿಕ ಚಿತ್ರ': ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ...

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

- Advertisement -
- Advertisement -

ಕೇರಳದ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಿಡಿದ ಭಾರತ ಮಾತೆಯ ಫೋಟೋ ಇರಿಸಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಕಿಡಿಕಾರಿದ್ದು, “ಈ ನಡೆಯು ಸಾಂವಿಧಾನಿಕ ಮಾನದಂಡಗಳ ಸ್ಪಷ್ಟ ಉಲ್ಲಂಘನೆ” ಎಂದಿದ್ದಾರೆ.

ಭಾರತಮಾತೆ ಎನ್ನಲಾಗುವ ಕೇಸರಿ ಧ್ವಜ ಹಿಡಿದ ಮಹಿಳೆಯ ಭಾವಚಿತ್ರ ‘ಧಾರ್ಮಿಕ ಚಿತ್ರ’ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಅಧಿಕೃತ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಂತಹ ಚಿತ್ರವನ್ನು ಪೂಜಿಸುವುದು ‘ಸಂವಿಧಾನದ ಮೂಲ ತತ್ವಗಳನ್ನು ಬುಡಮೇಲು ಮಾಡಿದಂತೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವನ್‌ಕುಟ್ಟಿ ಹೇಳಿದ್ದಾರೆ.

ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಪೋಟೋ ಇರಿಸಿದ್ದಕ್ಕಾಗಿ ಎರಡು ಬಾರಿ ಸರ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು. ಆರಂಭದಲ್ಲಿ ಸಿಎಂ ಪಿಣರಾಯಿ ವಿಜಯನ್‌ ಕಾರ್ಯಕ್ರಮವೊಂದಕ್ಕೆ ಗೈರಾಗದರೆ, ಎರಡನೇ ಬಾರಿ ಸಚಿವ ಶಿವನ್‌ಕುಟ್ಟಿ ಕಾರ್ಯಕ್ರಮದಿಂದ ಅರ್ಧದಲ್ಲಿ ನಿರ್ಗಮಿಸಿದ್ದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ನಡೆ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ರಾಜಕಾರಣಿಗಳ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ಬೀದಿಗಳಲ್ಲಿ ಪ್ರತಿಭಟನೆಗಳು ಆಯೋಜಿಸಲಾಗುತ್ತಿದೆ. ಈ ನಡುವೆ ಸಚಿವ ಶಿವನ್‌ಕುಟ್ಟಿ ರಾಜ್ಯಪಾಲರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ವಿವಿಧ ವಿಧಿಗಳನ್ನು ಉಲ್ಲೇಖಿಸಿದ ಶಿವನ್‌ಕುಟ್ಟಿ, “ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಯನ್ನು ಉತ್ತೇಜಿಸುವುದನ್ನು ನಿಷೇಧಿಸಲಾಗಿದೆ. ಈ ವಿಧಿಗಳು ಧಾರ್ಮಿಕ ವಿಷಯಗಳಲ್ಲಿ ರಾಜ್ಯದ ತಟಸ್ಥತೆಯನ್ನು ಆದೇಶಿಸುತ್ತವೆ” ಎಂದಿದ್ದಾರೆ.

“ಆದ್ದರಿಂದ, ರಾಜ್ಯಪಾಲರ ನಡೆಯು ಭಾರತೀಯ ಸಂವಿಧಾನದ ಜಾತ್ಯತೀತ ಸ್ವರೂಪದ ಮೇಲಿನ ಸ್ಪಷ್ಟ ದಾಳಿಯಾಗಿದೆ. ಇದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲದೆ, ಸಂವಿಧಾನವು ಖಾತರಿಪಡಿಸಿದ ಜಾತ್ಯತೀತ ಮೌಲ್ಯಗಳನ್ನು ದುರ್ಬಲಗೊಳಿಸುವ ಕೃತ್ಯವಾಗಿದೆ” ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಭಾವಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ರಾಜಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮವನ್ನು ಬಹಿಷ್ಕರಿಸಿದ ತಮ್ಮ ಇತ್ತೀಚಿನ ನಿರ್ಧಾರವನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಇಂತಹ ಸಾಂವಿಧಾನಿಕ ಉಲ್ಲಂಘನೆಗಳಿಗೆ ಸಾಕ್ಷಿಯಾಗಲು ಸಾಧ್ಯವಾಗದ ಕಾರಣ ನಾನು ಹೊರನಡೆದೆ. ಸಂವಿಧಾನವನ್ನು ಎತ್ತಿಹಿಡಿಯುವ ನನ್ನ ಜವಾಬ್ದಾರಿಯನ್ನು ನಾನು ಪೂರೈಸಿದ್ದೇನೆ. ಸಂವಿಧಾನದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಬದ್ಧನಾಗಿದ್ದೇನೆ” ಎಂದಿದ್ದಾರೆ.

ವಿವಾದಿತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವನ್‌ಕುಟ್ಟಿ, “ರಾಜ್ಯಪಾಲರು ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಧಿಕೃತ ಸಮಾರಂಭದಲ್ಲಿ ಕೇಸರಿ ಧ್ವಜ ಹೊತ್ತ ಭಾರತ ಮಾತೆಯ ಚಿತ್ರವನ್ನು ಪ್ರದರ್ಶಿಸುವುದು ಮತ್ತು ಪೂಜಿಸುವುದು ದೇಶದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿ ನಿರ್ದಿಷ್ಟ ಧಾರ್ಮಿಕ ಚಿಹ್ನೆಯನ್ನು ‘ಅಧಿಕೃತವಾಗಿ ಅನುಮೋದಿಸಿದಂತೆ’ ಎಂದಿದ್ದಾರೆ.

ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಚಿಹ್ನೆಗಳನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಬಳಸುವ ಬಗ್ಗೆ ಸರ್ಕಾರದ ಭಿನ್ನಾಭಿಪ್ರಾಯದ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...