Homeಕರ್ನಾಟಕಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

- Advertisement -
- Advertisement -

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಈ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿನ ಆವರಣದಲ್ಲಿ ಓಡಾಡುತ್ತಿರುವ ವಿಡಿಯೊ ವೈರಲ್ ಆಗಿದೆ.

ಕಾಲೇಜಿನ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ಕೇಳಿಕೊಂಡಿದ್ದು, ಆದರೆ ವಿದ್ಯಾರ್ಥಿನಿಯರು ಇದನ್ನು ನಿರಾಕರಿಸಿದ್ದರು. ಇದರ ನಂತರ ಹಲವಾರು ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ವಿವಾದದ ಬಗ್ಗೆ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕರು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಪೋಷಕರು, “ಶಾಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಹಬ್ಬಗಳ ಸಂದರ್ಭದಲ್ಲಿ ನಾವು ನಮ್ಮ ಮಕ್ಕಳನ್ನು ಕಳುಹಿಸಿದ್ದೇವೆ. ಯಾವುದನ್ನೂ ವಿವಾದ ಮಾಡಿಲ್ಲ. ಹಿಜಾಬ್ ನಮ್ಮ ಸಂಪ್ರದಾಯವಾಗಿದ್ದು, ಅದರ ಬಗ್ಗೆ ನೀವೇಕೆ ವಿವಾದ ಮಾಡುತ್ತೀರ” ಎಂದು ಕೇಳಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರಬಾರದು ಎಂದು ಪ್ರಿನ್ಸಿಪಾಲ್ ಹೇಳಿದ್ದಾರೆ. ಇದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಿದಂತೆ ಆಗುತ್ತದೆ” ಎಂದು ಮತ್ತೊಬ್ಬ ಪೋಷಕರು ಸಭೆಯಲ್ಲಿ ಹೇಳಿದ್ದಾರೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, “ಶಾಲೆಯಲ್ಲಿ ನಡೆದ ಸಭೆಯಲ್ಲಿ ಡ್ರೆಸ್‌‌ ಕೋಡ್ ಬಗ್ಗೆ ಒಳ್ಳೆಯ ರೀತಿಯಲ್ಲಿ ಹೇಳಿದ್ದೇನೆ. ಇದರ ಫಲಿತಾಂಶ ಏನು ಎಂದು ಹೇಳಲು ಸಾಧ್ಯವಿಲ್ಲ. ನಾನು ಎರಡು ಗಂಟೆ ಮಾನವೀಯತೆಯಲ್ಲಿ ಮಾತನಾಡಿದ್ದೇನೆ. ಸರ್ಕಾರದ ಆದೇಶ ತಿಳಿಸಿದ್ದೇನೆ. ನಮಗೆ ಮಕ್ಕಳೆಲ್ಲವೂ ಒಂದೇ, ಯಾರಿಗೂ ಅನ್ಯಾಯ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಕಾಲೇಜಿಗೆ ಕರೆ ಮಾಡಿದ್ದರೂ, ಪ್ರಿನ್ಸಿಪಾಲ್‌ ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...