Homeಚಳವಳಿರಾಜಸ್ಥಾನದ ಜಲಿಯನ್‌ವಾಲಾ ಭಾಗ್‌‌ ‘ಮಂಗರ್‌ ಧಾಮ’ದ ಕೇಸರಿಕರಣ; ಆದಿವಾಸಿಗಳಿಂದ ಭಾರಿ ಪ್ರತಿಭಟನೆ

ರಾಜಸ್ಥಾನದ ಜಲಿಯನ್‌ವಾಲಾ ಭಾಗ್‌‌ ‘ಮಂಗರ್‌ ಧಾಮ’ದ ಕೇಸರಿಕರಣ; ಆದಿವಾಸಿಗಳಿಂದ ಭಾರಿ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಜಲಿಯನ್‌ಲಾಲಾ ಭಾಗ್‌‌ ಎಂದೇ ಪ್ರಸಿದ್ದಿ ಹೊಂದಿರುವ ಮತ್ತು ಆದಿವಾಸಿಗಳು ತಮ್ಮ ಸ್ವಾಭಿಮಾನದ ಸಂಕೇತವಾಗಿ ಕಾಣುವ ‘ಮಂಗರ್‌ ಧಾಮ್‌’ ಸ್ಮಾರಕವನ್ನು ಕೇಸರಿಕರಣಗೊಳಿಸುವುದನ್ನು ವಿರೋಧಿಸಿ ನಾಲ್ಕು ರಾಜ್ಯಗಳ ಹತ್ತಾರು ಸಾವಿರ ಆದಿವಾಸಿಗಳು ಭಾನುವಾರ ವಾಹನ ಜಾಥಾವನ್ನು ಆಯೋಜಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.

ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ಸುಮಾರು 15 ಸಾವಿರ ಆದಿವಾಸಿಗಳು ಬುಡಕಟ್ಟು ‘ಬಿಲ್‌ಪ್ರದೇಶ ಸಂದೇಶ್ ವಾಹನ ಯಾತ್ರೆ’ಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಮಂಗರ್ ಧಾಮವನ್ನು ಕೇಸರಿಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ, ಎಲ್ಲಾ ಪಕ್ಷಗಳ ರಾಜಕೀಯವನ್ನು ಕೊನೆಗೊಳಿಸುತ್ತೇವೆ ಎಂದು ಆದಿವಾಸಿ ಪರಿವಾರ ಮತ್ತು ಭಿಲ್ ಪ್ರದೇಶ್ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಜ್ಞೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯು ಮಂಗರ್ ಧಾಮದಲ್ಲಿ ಸುಮಾರು 12 ಸಾವಿರ ಕಾರ್ಯಕರ್ತರನ್ನು ಸೇರಿಸಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ವಾಹನ ರ್‍ಯಾಲಿ ನಡೆಸಿತ್ತು. ಅಲ್ಲದೆ ಅಲ್ಲಿ ಆರೆಸ್ಸೆಸ್ಸಿನ ಧ್ವಜವನ್ನು ನಟ್ಟು ಆದಿವಾಸಿಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಕೂಡಾ ಆರೋಪಿಸಲಾಗಿದೆ.

ಇದನ್ನೂ ಓದಿ: 9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

ಇದನ್ನು ವಿರೋಧಿಸಿ ಅದೇ ಸ್ಥಳದಲ್ಲಿ ಭಾನುವಾರದಂದು ನೂತನ ರಾಜಕೀಯ ಸಂಘಟನೆಯಾದ ರಾಷ್ಟ್ರೀಯ ಬುಡಕಟ್ಟು ಪಕ್ಷ(ಎನ್‌ಟಿಪಿ)ದ ವತಿಯಿಂದ ಸುಮಾರು 15 ಸಾವಿರ ಕಾರ್ಯಕರ್ತರೊಂದಿಗೆ ವಾಹನ ಜಾಥಾ ನಡೆಸಿದೆ.

ಸೇರಿದ್ದ ಜನಸಮೂಹವು ಬುಡಕಟ್ಟು ಪರಂಪರೆಯ ಮಂಗರ್ ಧಾಮವನ್ನು ಯಾವುದೇ ಸಂದರ್ಭದಲ್ಲೂ ಕೇಸರಿಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಂಗರ್ ಧಾಮದಲ್ಲಿ ರಾಜಕೀಯ ಮಾಡುವ ಹಕ್ಕು  ಬಿಜೆಪಿ, ಕಾಂಗ್ರೆಸ್ ಮತ್ತು ಬಿಟಿಪಿ (ಭಾರತೀಯ ಬುಡಕಟ್ಟು ಪಕ್ಷ) ಸೇರಿದಂತೆ ಯಾರಿಗೂ ಇಲ್ಲ ಎಂದು ಆದಿವಾಸಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಒಟ್ಟು 15 ಆರೋಪಿಗಳ ಬಂಧನ

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡುಂಗರ್‌ಪುರ ಬುಡಕಟ್ಟು ಪರಿವಾರದ ಭನ್ವರ್‌ಲಾಲ್ ಪರ್ಮಾರ್, “ಬಿಜೆಪಿ, ಕಾಂಗ್ರೆಸ್ ಮತ್ತು ಬಿಟಿಪಿ ಪಕ್ಷಗಳ ರಾಜಕೀಯ ಈ ಕ್ಷೇತ್ರದಲ್ಲಿ ಕೊನೆಗೊಳ್ಳಬೇಕಿದೆ. ಬಿಟಿಪಿಯನ್ನು ಸಹ ಬೆಂಬಲಿಸಬೇಕಾಗಿಲ್ಲ. ಬುಡಕಟ್ಟು ಪರಿವಾರ ಯಾವ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕೆ ಇಳಿಸುತ್ತಾರೋ ಅವರನ್ನು ಗೆಲ್ಲಿಸಬೇಕು” ಎಂದು ಹೇಳಿದ್ದಾರೆ.

“ಧರಿಯಾವಾಡದ ಉಪಚುನಾವಣೆಯಲ್ಲಿ ಆದಿವಾಸಿ ಪರಿವಾರ ಮಾಡಿದ್ದು ಇದನ್ನೇ” ಎಂದು ಭನ್ವರಲಾಲ್ ಸ್ಪಷ್ಟಪಡಿಸಿದ್ದಾರೆ. ಹೊಸ ಪಕ್ಷವಾದ ಎನ್‌ಟಿಪಿಯನ್ನು ಬುಡಕಟ್ಟು ಪರವಾರದಿಂದ ಡುಂಗರ್‌ಪುರದಲ್ಲಿ ರಾಜಕೀಯ ಸಂಘಟನೆಯಾಗಿ ನೋಂದಾಯಿಸಲಾಗಿದೆ.

ಮಂಗರ್ ಧಾಮ ಭಿಲ್ ರಾಜ್ಯದ ರಾಜಧಾನಿಯಾಗಲಿದೆ!

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಿಲ್ ಪ್ರದೇಶ ಮುಕ್ತಿ ಮೋರ್ಚಾದ ಕೆಲವು ಮುಖಂಡರು ಬುಡಕಟ್ಟು ಪರಿವಾರಕ್ಕಾಗಿ ಪ್ರತ್ಯೇಕ ‘ಭಿಲ್’ ರಾಜ್ಯಕ್ಕಾಗಿ ಒತ್ತಾಯಿಸಿದ್ದು, ಭಿಲ್ ರಾಜ್ಯದ ರಾಜಧಾನಿ ಮಂಗರ್‌ ಧಾಮ ಆಗಲಿದೆ ಎಂದು ಹೇಳಿದ್ದಾರೆ.

ಬುಡಕಟ್ಟು ಪರಿವಾರದ ಮಣಿಲಾಲ್ ಗರಾಸಿಯಾ ಮಾತನಾಡಿ, “ಆದಿವಾಸಿಗಳು ಪ್ರಕೃತಿ ಆರಾಧಕರಾಗಿದ್ದು, ಅವರಿಗೂ ಯಾವುದೇ ಧರ್ಮಕ್ಕೂ ಸಂಬಂಧವಿಲ್ಲ. ಆದ್ದರಿಂದ ಮನೆಯಲ್ಲಿ ನಡೆಯುವ ಯಾವುದೇ ಪೂಜೆಗೆ ಬ್ರಾಹ್ಮಣರನ್ನು ಕರೆಯುವ ಅನಿವಾರ್ಯತೆ ಇಲ್ಲವಾಗಬೇಕು” ಎಂದು ಹೇಳಿದ್ದಾರೆ.

“ಆದಿವಾಸಿ ರಾಣಾ ಪೂಂಜಾ ಇಲ್ಲದೆ ಮಹಾರಾಣಾ ಪ್ರತಾಪನ ಇತಿಹಾಸ ಏನೂ ಅಲ್ಲ” ಎಂದು ಗರಾಸಿಯಾ ಪ್ರತಿಪಾಸಿದ್ದಾರೆ.

ಬುಡಕಟ್ಟು ಪರಿವಾರ ಮತ್ತು ಮುಕ್ತಿ ಮೋರ್ಚಾ, ಬಿಜೆಪಿ, ಕಾಂಗ್ರೆಸ್ ಮತ್ತು ಬಿಟಿಪಿಗೆ ಮಂಗರ್ ಧಾಮ್‌ನಲ್ಲಿ ಪಕ್ಷದ ಧ್ವಜಗಳನ್ನು ಹಾಕದಂತೆ ಎಚ್ಚರಿಕೆ ನೀಡಿದೆ. “ಮಂಗರ್ ಧಾಮ ಆದಿವಾಸಿಗಳ ಹುತಾತ್ಮರಾದ ಪುಣ್ಯಭೂಮಿ. ಆದ್ದರಿಂದಲೇ ಇಲ್ಲಿ ರಾಜಕೀಯ ಬೇಡ. ಆದಿವಾಸಿಗಳ ಈ ಜಾಗವನ್ನು ಆದಿವಾಸಿಗಳಲ್ಲದವರ ವಶಕ್ಕೆ ಕೊಡುವಲ್ಲಿ ಬಿಜೆಪಿ ನಿರತವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಆಗಸ್ಟ್ 9 ರಂದು ಕಾಂಗ್ರೆಸ್‌ನ ಪಾದಯಾತ್ರೆ

ಬಿಜೆಪಿ ಜಾಥಾದ ನಂತರ, ಆಗಸ್ಟ್ 9 ರಂದು, 75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷವು 75 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ. ಈ ಜಾಥಾ ಮಂಗರ್ ಧಾಮದಿಂದಲೇ ಆರಂಭಿಸಲಾಗುವುದು ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಏನಿದು ಮಂಗರ್‌ ಧಾಮ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಆರು ವರ್ಷಗಳ ಮೊದಲು ನವೆಂಬರ್ 17, 1913 ರಂದು ರಾಜಸ್ಥಾನ-ಗುಜರಾತ್ ಗಡಿಯ ಮಂಗರ್ ಬೆಟ್ಟದಲ್ಲಿ ಬ್ರಿಟೀಷ್‌ ಮತ್ತು ಭಾರತದ ರಾಜರಿಂದ ನಡೆದ ಹತ್ಯಾಕಾಂಡದ ಸ್ಮಾರಕ ಸ್ಥಳವಾಗಿದೆ ಮಂಗರ್‌ ಧಾಮ.

ಜಲಿಯನ್ ವಾಲಾಬಾಗ್‌ನಲ್ಲಿ ಬ್ರಿಟಿಷರ ಆಡಳಿತದ ಗುಂಡಿಗೆ ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದರು. ಮಂಗರ್ ಹತ್ಯಾಕಾಂಡದಲ್ಲಿ ಒಂದೂವರೆ ಸಾವಿರ ಜನರು ಸತ್ತರು ಎಂದು ಇತಿಹಾಸಹಾರರು ದಾಖಲಿಸಿದ್ದಾರೆ. ಮಂಗರ್ ಬೆಟ್ಟದಲ್ಲಿ ನೆರೆದಿದ್ದ ಸಾವಿರಾರು ಆದಿವಾಸಿಗಳನ್ನು ಭಾರತ ಮತ್ತು ಇಂಗ್ಲಿಷ್ ರಾಜಪ್ರಭುತ್ವದ ಸೈನ್ಯಗಳು ಸೇರಿಕೊಂಡು ಹತ್ಯಾಕಾಂಡ ನಡೆಸಿತ್ತು.

ಈ ಘಟನೆಯು ಜಲಿಯನ್ ವಾಲಾಬಾಗ್‌ಗಿಂತಲೂ ದೊಡ್ಡ ಹತ್ಯಾಕಾಂಡ ಎಂದು ಲೇಖಕರು, ಇತಿಹಾಸಕಾರರು ಮತ್ತು ಸ್ಥಳೀಯ ಜನರು ಹೇಳುತ್ತಾರೆ ಎಂದು ಬಿಬಿಸಿ ಹಿಂದಿ ವರದಿ ಹೇಳುತ್ತದೆ. ಆದರೆ, ಇಷ್ಟು ದೊಡ್ಡ ಹತ್ಯಾಕಾಂಡ ಇತಿಹಾಸದಲ್ಲಿ ದೊಡ್ಡ ಮಟ್ಟದಲ್ಲಿ ದಾಖಲಾಗಿಲ್ಲ.

ಇದನ್ನೂ ಓದಿ: ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಮಂಗರ್‌ ಧಾಮವೂ ರಾಜಸ್ಥಾನದ ರಾಜಧಾನಿ ಜೈಪುರದಿಂದ ಸುಮಾರು 550 ಕಿಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಬನ್ಸ್‌ವಾರಾ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿಮೀ ದೂರದಲ್ಲಿದೆ. 108 ವರ್ಷಗಳ ಹಿಂದೆ ನಡೆದ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದ್ದ ಪರ್ವತ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಅದೇ ಬೆಟ್ಟವನ್ನು ಈಗ ‘ಮಂಗರ್ ಧಾಮ’ ಎಂದು ಕರೆಯುತ್ತಾರೆ.

ಮಂಗರ್ ಬೆಟ್ಟವು ಸುತ್ತಲೂ ಕಾಡಿನಿಂದ ಆವೃತವಾಗಿದ್ದು, ಬೆಟ್ಟದ ಎತ್ತರವು ಸುಮಾರು 800 ಮೀಟರ್ ಹೊಂದಿದೆ. ಹತ್ಯಾಕಾಂಡದ ನಂತರ ಬ್ರಿಟೀಷರು ಆ ಬೆಟ್ಟದ ಬಳಿಗೆ ಜನರು ತೆರಳುವುದನ್ನು ನಿಷೇಧಿಸಿದ್ದರು. ಅಳಿದುಳಿದ ಜನರು ಅಲ್ಲಿಂದ ಪಲಾಯನ ಮಾಡಿದ್ದರು. ಈ ದುರ್ಘಟನೆ ನಡೆದು ಸುಮಾರು 80 ವರ್ಷಗಳ ಕಾಲ ಇಲ್ಲಿ ಏನೂ ಇರಲಿಲ್ಲ. ಆದರೆ ಕಳೆದ ಎರಡು ದಶಕಗಳ ಹಿಂದೆ ಇಲ್ಲಿ ಹುತಾತ್ಮರ ಸ್ಮಾರಕ, ವಸ್ತುಸಂಗ್ರಹಾಲಯ ಮತ್ತು ರಸ್ತೆ ನಿರ್ಮಿಸಲಾಗಿದೆ.

ಮಂಗರ್‌ ಧಾಮದ ಬಗ್ಗೆ ಬಿಬಿಸಿ ಹಿಂದಿಯ ವರದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...