Homeಕರ್ನಾಟಕಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ...

ಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ ವಶಕ್ಕೆ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ತೇಜಸ್ವಿನಿ (13) ಸಾವಿನ ಪ್ರಕರಣ ಸಂಬಂಧ ಪೊಲೀಸರು ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ 8ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿಯನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಗುರುವಾರ (ಜೂನ್ 8) ವಾಂತಿ ಮಾಡಿಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಶಾಲೆಯ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆ ಅಸುನೀಗಿದ್ದಳು.

ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ತೇಜಸ್ವಿನಿ ಪಾಲಕರು ಮಾಧ್ಯಮಗಳ ಜೊತೆ ಮಾತನಾಡಿ, ”ಐದು ದಿನಗಳ ಹಿಂದಷ್ಟೇ ಮಗಳನ್ನು ವಿದ್ಯಾಲಯಕ್ಕೆ ಸೇರಿಸಿದ್ದೆವು. ಅವಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ದಿಢೀರನೆ ಆಕೆ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವು: ವಸತಿ ಶಾಲೆ ಮುಖ್ಯಸ್ಥ ಪೊಲೀಸ್ ವಶಕ್ಕೆ

”ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿವಪುರ ಗ್ರಾಮಸ್ಥರು ಶನಿವಾರ ವರದಹಳ್ಳಿ ರಸ್ತೆಯಲ್ಲಿರುವ ವಿದ್ಯಾಲಯದ ಎದುರು ಈ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನಕಾರರು ವಿದ್ಯಾಲಯದ ಒಳಗೆ ನುಗ್ಗಲೂ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದರು.

”ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

”ಕಾಲು ನೋವು ಇರುವುದಾಗಿ ತೇಜಸ್ವಿನಿ ಹೇಳಿದ್ದಳು. ಮಂಜಪ್ಪ, ಮುಲಾಮು ಹಚ್ಚುವ ನೆಪದಲ್ಲಿ ಆಕೆಯನ್ನು ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನು ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಬಾಲಕಿಯರು ತಂಗಿರುವ ವಸತಿ ವಿದ್ಯಾಲಯದಲ್ಲಿ ರಾತ್ರಿ ವೇಳೆ ಪುರುಷರು ಇರಲು ಅವಕಾಶ ಕಲ್ಪಿಸಿದ್ದಾದರೂ ಏಕೆ?” ಎಂದು ಪ್ರತಿಭಟನಕಾರರು ಪ್ರಶ್ನಿಸಿದ್ದಾರೆ.

”ಬಾಲಕಿಯು ಅಸ್ವಸ್ಥಗೊಂಡಾಗಲೇ ಪಾಲಕರಿಗೆ ವಿಷಯ ತಿಳಿಸದೆ, ಮೃತಪಟ್ಟ ನಂತರ ಮಾಹಿತಿ ನೀಡಿರುವುದು ಅನುಮಾನ ಮೂಡಿಸಿದೆ. ಮಂಜಪ್ಪ ಅವರು ಚಿಕಿತ್ಸೆಯ ನೆಪದಲ್ಲಿ ತೇಜಸ್ವಿನಿಗೆ ಬಲವಂತವಾಗಿ ಅಗಾಧ ಪ್ರಮಾಣದಲ್ಲಿ ನೀರು ಕುಡಿಸಿದ್ದಾರೆ. ಇದನ್ನೂ ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೊಲೀಸರು ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಮಂಜಪ್ಪ ತಮ್ಮ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾಲಯದ ಕೆಲ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. ”ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ್ದ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, ”ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...