Homeಕರ್ನಾಟಕಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ...

ಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ ವಶಕ್ಕೆ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ತೇಜಸ್ವಿನಿ (13) ಸಾವಿನ ಪ್ರಕರಣ ಸಂಬಂಧ ಪೊಲೀಸರು ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ 8ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿಯನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಗುರುವಾರ (ಜೂನ್ 8) ವಾಂತಿ ಮಾಡಿಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಶಾಲೆಯ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆ ಅಸುನೀಗಿದ್ದಳು.

ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ತೇಜಸ್ವಿನಿ ಪಾಲಕರು ಮಾಧ್ಯಮಗಳ ಜೊತೆ ಮಾತನಾಡಿ, ”ಐದು ದಿನಗಳ ಹಿಂದಷ್ಟೇ ಮಗಳನ್ನು ವಿದ್ಯಾಲಯಕ್ಕೆ ಸೇರಿಸಿದ್ದೆವು. ಅವಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ದಿಢೀರನೆ ಆಕೆ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವು: ವಸತಿ ಶಾಲೆ ಮುಖ್ಯಸ್ಥ ಪೊಲೀಸ್ ವಶಕ್ಕೆ

”ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿವಪುರ ಗ್ರಾಮಸ್ಥರು ಶನಿವಾರ ವರದಹಳ್ಳಿ ರಸ್ತೆಯಲ್ಲಿರುವ ವಿದ್ಯಾಲಯದ ಎದುರು ಈ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನಕಾರರು ವಿದ್ಯಾಲಯದ ಒಳಗೆ ನುಗ್ಗಲೂ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದರು.

”ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

”ಕಾಲು ನೋವು ಇರುವುದಾಗಿ ತೇಜಸ್ವಿನಿ ಹೇಳಿದ್ದಳು. ಮಂಜಪ್ಪ, ಮುಲಾಮು ಹಚ್ಚುವ ನೆಪದಲ್ಲಿ ಆಕೆಯನ್ನು ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನು ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಬಾಲಕಿಯರು ತಂಗಿರುವ ವಸತಿ ವಿದ್ಯಾಲಯದಲ್ಲಿ ರಾತ್ರಿ ವೇಳೆ ಪುರುಷರು ಇರಲು ಅವಕಾಶ ಕಲ್ಪಿಸಿದ್ದಾದರೂ ಏಕೆ?” ಎಂದು ಪ್ರತಿಭಟನಕಾರರು ಪ್ರಶ್ನಿಸಿದ್ದಾರೆ.

”ಬಾಲಕಿಯು ಅಸ್ವಸ್ಥಗೊಂಡಾಗಲೇ ಪಾಲಕರಿಗೆ ವಿಷಯ ತಿಳಿಸದೆ, ಮೃತಪಟ್ಟ ನಂತರ ಮಾಹಿತಿ ನೀಡಿರುವುದು ಅನುಮಾನ ಮೂಡಿಸಿದೆ. ಮಂಜಪ್ಪ ಅವರು ಚಿಕಿತ್ಸೆಯ ನೆಪದಲ್ಲಿ ತೇಜಸ್ವಿನಿಗೆ ಬಲವಂತವಾಗಿ ಅಗಾಧ ಪ್ರಮಾಣದಲ್ಲಿ ನೀರು ಕುಡಿಸಿದ್ದಾರೆ. ಇದನ್ನೂ ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೊಲೀಸರು ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಮಂಜಪ್ಪ ತಮ್ಮ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾಲಯದ ಕೆಲ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. ”ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ್ದ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, ”ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...