Homeಕರ್ನಾಟಕಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ...

ಸಾಗರದ ದಲಿತ ಬಾಲಕಿಯ ಸಂಶಯಾಸ್ಪದ ಸಾವು ಪ್ರಕರಣ: ಲೈಂಗಿಕ ಕಿರುಕುಳದ ಶಂಕೆ; ವನಶ್ರೀ ಮುಖ್ಯಸ್ಥ ಮಂಜಪ್ಪ ವಶಕ್ಕೆ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ತೇಜಸ್ವಿನಿ (13) ಸಾವಿನ ಪ್ರಕರಣ ಸಂಬಂಧ ಪೊಲೀಸರು ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ 8ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿಯನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಗುರುವಾರ (ಜೂನ್ 8) ವಾಂತಿ ಮಾಡಿಕೊಂಡು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಶಾಲೆಯ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆ ಅಸುನೀಗಿದ್ದಳು.

ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ (ಎಚ್.ಪಿ.ಮಂಜಪ್ಪ) ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಬಗ್ಗೆ ತೇಜಸ್ವಿನಿ ಪಾಲಕರು ಮಾಧ್ಯಮಗಳ ಜೊತೆ ಮಾತನಾಡಿ, ”ಐದು ದಿನಗಳ ಹಿಂದಷ್ಟೇ ಮಗಳನ್ನು ವಿದ್ಯಾಲಯಕ್ಕೆ ಸೇರಿಸಿದ್ದೆವು. ಅವಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ದಿಢೀರನೆ ಆಕೆ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವು: ವಸತಿ ಶಾಲೆ ಮುಖ್ಯಸ್ಥ ಪೊಲೀಸ್ ವಶಕ್ಕೆ

”ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿವಪುರ ಗ್ರಾಮಸ್ಥರು ಶನಿವಾರ ವರದಹಳ್ಳಿ ರಸ್ತೆಯಲ್ಲಿರುವ ವಿದ್ಯಾಲಯದ ಎದುರು ಈ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನಕಾರರು ವಿದ್ಯಾಲಯದ ಒಳಗೆ ನುಗ್ಗಲೂ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದರು.

”ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

”ಕಾಲು ನೋವು ಇರುವುದಾಗಿ ತೇಜಸ್ವಿನಿ ಹೇಳಿದ್ದಳು. ಮಂಜಪ್ಪ, ಮುಲಾಮು ಹಚ್ಚುವ ನೆಪದಲ್ಲಿ ಆಕೆಯನ್ನು ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನು ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಬಾಲಕಿಯರು ತಂಗಿರುವ ವಸತಿ ವಿದ್ಯಾಲಯದಲ್ಲಿ ರಾತ್ರಿ ವೇಳೆ ಪುರುಷರು ಇರಲು ಅವಕಾಶ ಕಲ್ಪಿಸಿದ್ದಾದರೂ ಏಕೆ?” ಎಂದು ಪ್ರತಿಭಟನಕಾರರು ಪ್ರಶ್ನಿಸಿದ್ದಾರೆ.

”ಬಾಲಕಿಯು ಅಸ್ವಸ್ಥಗೊಂಡಾಗಲೇ ಪಾಲಕರಿಗೆ ವಿಷಯ ತಿಳಿಸದೆ, ಮೃತಪಟ್ಟ ನಂತರ ಮಾಹಿತಿ ನೀಡಿರುವುದು ಅನುಮಾನ ಮೂಡಿಸಿದೆ. ಮಂಜಪ್ಪ ಅವರು ಚಿಕಿತ್ಸೆಯ ನೆಪದಲ್ಲಿ ತೇಜಸ್ವಿನಿಗೆ ಬಲವಂತವಾಗಿ ಅಗಾಧ ಪ್ರಮಾಣದಲ್ಲಿ ನೀರು ಕುಡಿಸಿದ್ದಾರೆ. ಇದನ್ನೂ ವಿದ್ಯಾಲಯದ ಇತರ ವಿದ್ಯಾರ್ಥಿನಿಯರು ನೋಡಿದ್ದಾರೆ. ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೊಲೀಸರು ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಮಂಜಪ್ಪ ತಮ್ಮ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾಲಯದ ಕೆಲ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. ”ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ್ದ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, ”ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...