Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...